ದಲಿತ ನಾಯಕ ಡಾ.ಬಾಬು ಜಗಜೀವನ್ ರಾಂ ಅವರಿಗೆ ತಾಲೂಕು ಆಡಳಿತದಿಂದ ಅಗೌರವ; ಪುತ್ಥಳಿ ಬಳಿ ಸ್ವಚ್ಛತೆ ಮರೀಚಿಕೆ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ದಲಿತ ಮುಖಂಡರ ಆಕ್ರೋಶ: ಅಧಿಕಾರಿಗಳಿಗೆ ಶಾಸಕ ತರಾಟೆ

ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.

ಈ ವೇಳೆ ದಲಿತ ಮುಖಂಡ ರಾಜಘಟ್ಟ ಕಾಂತರಾಜು ಮಾತನಾಡಿ, ತಾಲ್ಲೂಕು ಆಡಳಿತ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡುತ್ತಿದೆ. ಆದರೆ ಪುತ್ಥಳಿಯನ್ನು ಸ್ವಚ್ಛಗೊಳಿಸಿಲ್ಲ, ಸುತ್ತಲೂ ಗ್ರೀನ್ ಮ್ಯಾಟ್ ಹಾಕಿಲ್ಲ ಹೂವಿನ ಅಲಂಕಾರ ಮಾಡಿಲ್ಲ. ಕಾಟಾಚಾರಕ್ಕೆ ಆಚರಣೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.

ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ‌.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

6 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

7 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

12 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

14 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

17 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

18 hours ago