ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.
ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.
ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…