ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.
ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.
ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…