ದಲಿತ ನಾಯಕ ಡಾ.ಬಾಬು ಜಗಜೀವನ್ ರಾಂ ಅವರಿಗೆ ತಾಲೂಕು ಆಡಳಿತದಿಂದ ಅಗೌರವ; ಪುತ್ಥಳಿ ಬಳಿ ಸ್ವಚ್ಛತೆ ಮರೀಚಿಕೆ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ದಲಿತ ಮುಖಂಡರ ಆಕ್ರೋಶ: ಅಧಿಕಾರಿಗಳಿಗೆ ಶಾಸಕ ತರಾಟೆ

ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.

ಈ ವೇಳೆ ದಲಿತ ಮುಖಂಡ ರಾಜಘಟ್ಟ ಕಾಂತರಾಜು ಮಾತನಾಡಿ, ತಾಲ್ಲೂಕು ಆಡಳಿತ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡುತ್ತಿದೆ. ಆದರೆ ಪುತ್ಥಳಿಯನ್ನು ಸ್ವಚ್ಛಗೊಳಿಸಿಲ್ಲ, ಸುತ್ತಲೂ ಗ್ರೀನ್ ಮ್ಯಾಟ್ ಹಾಕಿಲ್ಲ ಹೂವಿನ ಅಲಂಕಾರ ಮಾಡಿಲ್ಲ. ಕಾಟಾಚಾರಕ್ಕೆ ಆಚರಣೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.

ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ‌.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

5 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

17 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

18 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago