ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.
ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.
ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…