ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.
ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.
ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…