ದಲಿತ ನಾಯಕ ಡಾ.ಬಾಬು ಜಗಜೀವನ್ ರಾಂ ಅವರಿಗೆ ತಾಲೂಕು ಆಡಳಿತದಿಂದ ಅಗೌರವ; ಪುತ್ಥಳಿ ಬಳಿ ಸ್ವಚ್ಛತೆ ಮರೀಚಿಕೆ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ದಲಿತ ಮುಖಂಡರ ಆಕ್ರೋಶ: ಅಧಿಕಾರಿಗಳಿಗೆ ಶಾಸಕ ತರಾಟೆ

ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.

ಈ ವೇಳೆ ದಲಿತ ಮುಖಂಡ ರಾಜಘಟ್ಟ ಕಾಂತರಾಜು ಮಾತನಾಡಿ, ತಾಲ್ಲೂಕು ಆಡಳಿತ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡುತ್ತಿದೆ. ಆದರೆ ಪುತ್ಥಳಿಯನ್ನು ಸ್ವಚ್ಛಗೊಳಿಸಿಲ್ಲ, ಸುತ್ತಲೂ ಗ್ರೀನ್ ಮ್ಯಾಟ್ ಹಾಕಿಲ್ಲ ಹೂವಿನ ಅಲಂಕಾರ ಮಾಡಿಲ್ಲ. ಕಾಟಾಚಾರಕ್ಕೆ ಆಚರಣೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.

ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ‌.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

13 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago