ದಲಿತ ಬರಹಗಾರರು ತಮ್ಮ ಸಮುದಾಯಕ್ಕೆ ಮುಖಮಾಡಿ ಮಾತನಾಡಬೇಕು, ಬೆನ್ನು ಮಾಡಿ ಅಲ್ಲ – ನಾಟಕಕಾರ ಡಾ.ಕೆ.ವೈ.ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ದಲಿತ ಬರಹಗಾರರು ತಮ್ಮ ಸಮುದಾಯಕ್ಕೆ ಮುಖಮಾಡಿ ಮಾತನಾಡಬೇಕು, ಬೆನ್ನು ಮಾಡಿ ಅಲ್ಲ. ತಮ್ಮ ಸುತ್ತಲಿನ ಆಗು ಹೋಗುಗಳಿಗೆ ಸ್ಪಂದಿಸುವ ಗುಣವನ್ನು ಬೆಳಸಿಕೊಳ್ಳಬೇಕು ಎಂದು ನಾಟಕಕಾರ ಡಾ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.

ನಗರದ ಆರ್.ಡಿ.ಕನ್ವಂಷನ್ ಹಾಲ್ನಲ್ಲಿ ಭಾನುವಾರ ನಡೆದ ಡಾ.ಡಿ.ಆರ್.ನಾಗರಾಜ್ ಬಳಗ ಮತ್ತು ಬಿಗ್ ಕನ್ನಡ ಸಹಯೋಗದಲ್ಲಿ ಪ್ರಕಟಿಸಲಾಗಿರುವ ಉಪನ್ಯಾಸಕ ಡಾ.ಪ್ರಕಾಶ್ ಮಂಟೇದ ಅವರು ಬರೆದಿರುವ ‘ಅರಿವೇ ಕಂಡಾಯ’ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಲೋಕ ಸಂಚಾರದ ಅನುಭವ ಇದ್ದಾಗ ಮಾತ್ರ ಭಾರತ ನಮಗೆ ಅರ್ಥವಾಗುವುದು ಸುಲಭವಾಗಲಿದೆ. ಸಾಮಾಜಿಕ ಸತ್ಯದ ಸಂಗತಿಗಳನ್ನು ಗುಣವಾಚಕಗಳು ಮುಚ್ಚಿಡುತ್ತವೆ. ಹಾಗಾಗಿ ಬರಹಗಾರರು ಗುಣವಾಚಕಗಳಿಗೆ ಒಳಗಾಗದೆ ಸಂವಾದಗಳನ್ನು ಹುಟ್ಟುಹಾಕಬೇಕು. ನಮ್ಮ ಇಂದಿನ ಓದು ಸಂವಿಧಾನಕ್ಕೆ ಬಂದು ನಿಂತಿದೆ, ಅದರಿಂದ ಮುಂದಕ್ಕೆ ಹೋಗಿಲ್ಲ. ಸಂವಿಧಾನದ ಅಚೆಗಿನ ಓದು ಈಗ ನಮ್ಮದಾಗಬೇಕಿದೆ. ಸದಾ ಜನ ಚಳುವಳಿಗಳ ಜೊತೆಗಿರುವವರು ಬರೆದಾಗ ಆದು ವಾಸ್ತವಕ್ಕೆ ಹತ್ತಿರವಾಗಿರಲಿದೆ. ನಮ್ಮ ಹೊಟ್ಟೆಯ ಹಸಿವು ನೀಗಿದ ತಕ್ಷಣ ಜ್ಞಾನದ ಹಸಿವನ್ನು ಮರೆಯುತ್ತಿದ್ದೇವೆ. ಈ ಬಗ್ಗೆ ನಾವು ಸದಾ ಎಚ್ಚರವಹಿಸಬೇಕಾಗಿದೆ ಎಂದರು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಪ್ರಗತಿಪರ ಚಿಂತಕ ಮಂಜುನಾಥ ಎಂ. ಅದ್ದೆ, ಕಲ್ಯಾಣ ರಾಜ್ಯದ ನಿರ್ಮಾಣಕ್ಕಾಗಿ ರಾಜಕಾರಣ ನಡೆಯಬೇಕು. ಆದರೆ ಈಗ ಒಬ್ಬರನ್ನು ಮತ್ತೊಬ್ಬರು ಬಗ್ಗುಬಡಿಯುವ ರಾಜಕಾರಣ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದರು.

ಭಾಷೆ ದುಡಿಯುವ ಜನರ ಗುರುತಿಸುವಿಕೆಯಾಗಿದೆ. ಹೆಚ್ಚು ವಿದ್ಯೆ ಕಲಿತವರಲ್ಲಿ ಜಾತಿ ವ್ಯವಸ್ಥೆ ಇಲ್ಲದಾಗಬೇಕಿತ್ತು. ಆದರೆ ವಿಶ್ವ ವಿದ್ಯಾಲಯಗಳಿಗೆ ಹೋಗುತ್ತಿದ್ದಂತೆ ಜಾತಿದಿಗಳಾಗಿ ರೂಪುಗೋಳ್ಳುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ. ಇದು ದುರಿತಕಾಲವಾಗಿದ್ದು, ಇಲ್ಲಿ ಜಾತಿ ಮೇಲಾಟದಲ್ಲಿ ಮುಳುಗದೆ ಮುನ್ನಡೆಯಬೇಕು. ಪ್ರಯೋಗಾಲಯದಲ್ಲಿ ಕಪ್ಪೆಯನ್ನು ಸೀಳುವಂತೆ ಸೀಳಿ ನೋಡುವುದನ್ನು ಬಿಟ್ಟು ನಡೆಯಬೇಕಾಗಿದೆ. ನಮ್ಮ ಹಕ್ಕುಗಳನ್ನು ಪಡೆಯುವ ಮಾರ್ಗ ಸದಾ ಕಾಲ ನ್ಯಾಯಯುತವಾಗಿರಬೇಕಾಗಿದೆ ಎಂದರು.

ಪುಸ್ತಕ ಕುರಿತು ಮಾತನಾಡಿದ ಪುಸ್ತಕ ಪ್ರಕಾಶಕ ಆಕೃತಿ ಗುರುಪ್ರಸಾದ್, ಪ್ರತಿ ನಿತ್ಯವು ರಾಜಕಾರಣ,ಪ್ರಸ್ತುತ ಸಂಗತಿಗಳ ಕುರಿತ ಅಂಕಣಗಳನ್ನು ಎಲ್ಲರು ಬರೆಯುತ್ತಾರೆ. ಆದರೆ ತಮ್ಮ ಸಮುದಾಯದ ಕುರಿತು ಅಂಕಗಳು ಬರೆಯುವುದು ಕಡಿಮೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕ ಡಾ.ಪ್ರಕಾಶ್ ಮಂಟೇದ ಅವರ ‘ಅರಿವೇ ಕಂಡಾಯ’ ಅಂಕಣ ಬರಹಗಳ ಪುಸ್ತಕ ಉತ್ತಮವಾಗಿ ಮೂಡಿ ಬಂದಿದೆ ಎಂದರು.

‘ಅರಿವೇ ಕಂಡಾಯ’ ಪುಸ್ತಕ ಕುರಿತು ಲೇಖಕಿ ಡಾ.ಕೆ.ವಿ.ನೇತ್ರಾವತಿ,ಡಾ.ರವಿಕುಮಾರ್ ನೀಹ,ಡಾ.ಸುಭಾಷ್ ರಾಜಮಾನೆ, ರವಿಕುಮಾರ್ ಬಾಗಿ ಮಾತನಾಡಿದರು. ಉದ್ಯಮಿ ಜಿ.ರಾಜಗೋಪಾಲ್, ಪ್ರಕಾಶಕಿ ಜಗದಾಂಬ ಇದ್ದರು.

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 minutes ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

16 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

22 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago