ದೊಡ್ಡಬಳ್ಳಾಪುರ: ದಲಿತ ಬರಹಗಾರರು ತಮ್ಮ ಸಮುದಾಯಕ್ಕೆ ಮುಖಮಾಡಿ ಮಾತನಾಡಬೇಕು, ಬೆನ್ನು ಮಾಡಿ ಅಲ್ಲ. ತಮ್ಮ ಸುತ್ತಲಿನ ಆಗು ಹೋಗುಗಳಿಗೆ ಸ್ಪಂದಿಸುವ ಗುಣವನ್ನು ಬೆಳಸಿಕೊಳ್ಳಬೇಕು ಎಂದು ನಾಟಕಕಾರ ಡಾ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.
ನಗರದ ಆರ್.ಡಿ.ಕನ್ವಂಷನ್ ಹಾಲ್ನಲ್ಲಿ ಭಾನುವಾರ ನಡೆದ ಡಾ.ಡಿ.ಆರ್.ನಾಗರಾಜ್ ಬಳಗ ಮತ್ತು ಬಿಗ್ ಕನ್ನಡ ಸಹಯೋಗದಲ್ಲಿ ಪ್ರಕಟಿಸಲಾಗಿರುವ ಉಪನ್ಯಾಸಕ ಡಾ.ಪ್ರಕಾಶ್ ಮಂಟೇದ ಅವರು ಬರೆದಿರುವ ‘ಅರಿವೇ ಕಂಡಾಯ’ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲೋಕ ಸಂಚಾರದ ಅನುಭವ ಇದ್ದಾಗ ಮಾತ್ರ ಭಾರತ ನಮಗೆ ಅರ್ಥವಾಗುವುದು ಸುಲಭವಾಗಲಿದೆ. ಸಾಮಾಜಿಕ ಸತ್ಯದ ಸಂಗತಿಗಳನ್ನು ಗುಣವಾಚಕಗಳು ಮುಚ್ಚಿಡುತ್ತವೆ. ಹಾಗಾಗಿ ಬರಹಗಾರರು ಗುಣವಾಚಕಗಳಿಗೆ ಒಳಗಾಗದೆ ಸಂವಾದಗಳನ್ನು ಹುಟ್ಟುಹಾಕಬೇಕು. ನಮ್ಮ ಇಂದಿನ ಓದು ಸಂವಿಧಾನಕ್ಕೆ ಬಂದು ನಿಂತಿದೆ, ಅದರಿಂದ ಮುಂದಕ್ಕೆ ಹೋಗಿಲ್ಲ. ಸಂವಿಧಾನದ ಅಚೆಗಿನ ಓದು ಈಗ ನಮ್ಮದಾಗಬೇಕಿದೆ. ಸದಾ ಜನ ಚಳುವಳಿಗಳ ಜೊತೆಗಿರುವವರು ಬರೆದಾಗ ಆದು ವಾಸ್ತವಕ್ಕೆ ಹತ್ತಿರವಾಗಿರಲಿದೆ. ನಮ್ಮ ಹೊಟ್ಟೆಯ ಹಸಿವು ನೀಗಿದ ತಕ್ಷಣ ಜ್ಞಾನದ ಹಸಿವನ್ನು ಮರೆಯುತ್ತಿದ್ದೇವೆ. ಈ ಬಗ್ಗೆ ನಾವು ಸದಾ ಎಚ್ಚರವಹಿಸಬೇಕಾಗಿದೆ ಎಂದರು.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಪ್ರಗತಿಪರ ಚಿಂತಕ ಮಂಜುನಾಥ ಎಂ. ಅದ್ದೆ, ಕಲ್ಯಾಣ ರಾಜ್ಯದ ನಿರ್ಮಾಣಕ್ಕಾಗಿ ರಾಜಕಾರಣ ನಡೆಯಬೇಕು. ಆದರೆ ಈಗ ಒಬ್ಬರನ್ನು ಮತ್ತೊಬ್ಬರು ಬಗ್ಗುಬಡಿಯುವ ರಾಜಕಾರಣ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದರು.
ಭಾಷೆ ದುಡಿಯುವ ಜನರ ಗುರುತಿಸುವಿಕೆಯಾಗಿದೆ. ಹೆಚ್ಚು ವಿದ್ಯೆ ಕಲಿತವರಲ್ಲಿ ಜಾತಿ ವ್ಯವಸ್ಥೆ ಇಲ್ಲದಾಗಬೇಕಿತ್ತು. ಆದರೆ ವಿಶ್ವ ವಿದ್ಯಾಲಯಗಳಿಗೆ ಹೋಗುತ್ತಿದ್ದಂತೆ ಜಾತಿದಿಗಳಾಗಿ ರೂಪುಗೋಳ್ಳುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ. ಇದು ದುರಿತಕಾಲವಾಗಿದ್ದು, ಇಲ್ಲಿ ಜಾತಿ ಮೇಲಾಟದಲ್ಲಿ ಮುಳುಗದೆ ಮುನ್ನಡೆಯಬೇಕು. ಪ್ರಯೋಗಾಲಯದಲ್ಲಿ ಕಪ್ಪೆಯನ್ನು ಸೀಳುವಂತೆ ಸೀಳಿ ನೋಡುವುದನ್ನು ಬಿಟ್ಟು ನಡೆಯಬೇಕಾಗಿದೆ. ನಮ್ಮ ಹಕ್ಕುಗಳನ್ನು ಪಡೆಯುವ ಮಾರ್ಗ ಸದಾ ಕಾಲ ನ್ಯಾಯಯುತವಾಗಿರಬೇಕಾಗಿದೆ ಎಂದರು.
ಪುಸ್ತಕ ಕುರಿತು ಮಾತನಾಡಿದ ಪುಸ್ತಕ ಪ್ರಕಾಶಕ ಆಕೃತಿ ಗುರುಪ್ರಸಾದ್, ಪ್ರತಿ ನಿತ್ಯವು ರಾಜಕಾರಣ,ಪ್ರಸ್ತುತ ಸಂಗತಿಗಳ ಕುರಿತ ಅಂಕಣಗಳನ್ನು ಎಲ್ಲರು ಬರೆಯುತ್ತಾರೆ. ಆದರೆ ತಮ್ಮ ಸಮುದಾಯದ ಕುರಿತು ಅಂಕಗಳು ಬರೆಯುವುದು ಕಡಿಮೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕ ಡಾ.ಪ್ರಕಾಶ್ ಮಂಟೇದ ಅವರ ‘ಅರಿವೇ ಕಂಡಾಯ’ ಅಂಕಣ ಬರಹಗಳ ಪುಸ್ತಕ ಉತ್ತಮವಾಗಿ ಮೂಡಿ ಬಂದಿದೆ ಎಂದರು.
‘ಅರಿವೇ ಕಂಡಾಯ’ ಪುಸ್ತಕ ಕುರಿತು ಲೇಖಕಿ ಡಾ.ಕೆ.ವಿ.ನೇತ್ರಾವತಿ,ಡಾ.ರವಿಕುಮಾರ್ ನೀಹ,ಡಾ.ಸುಭಾಷ್ ರಾಜಮಾನೆ, ರವಿಕುಮಾರ್ ಬಾಗಿ ಮಾತನಾಡಿದರು. ಉದ್ಯಮಿ ಜಿ.ರಾಜಗೋಪಾಲ್, ಪ್ರಕಾಶಕಿ ಜಗದಾಂಬ ಇದ್ದರು.
ದೊಡ್ಡಬಳ್ಳಾಪುರ: ಲೀಸ್ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…