ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್ ಆರ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ್(19)ಮೇಲೆ ಅವರ ತಂದೆ ಪ್ರಕಾಶ್, ವೀರಣ್ಣ ಮತ್ತು ಅರುಣ್ ಎಂಬುವವರು ಹಲ್ಲೆ ನಡೆಸಿದ್ದು, ಈ ಘಟನೆಯಲ್ಲಿ ಮಾನ್ಯ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ ಸುಮಾರು 6 ರಿಂದ 6.30ರ ಸುಮಾರಿಗೆ ಮನೆಯಲ್ಲಿ ಹಲ್ಲೆ ನಡೆದಿದ್ದು, ರಾತ್ರಿ 9.30ರ ಸುಮಾರಿಗೆ ಮಾನ್ಯ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೆ ಸ್ಪ್ರಿಂಕ್ಲರ್ ಪೈಪ್ ಮತ್ತು ಕೊಡಲಿಯನ್ನು ಬಳಸಲಾಗಿದ್ದು, ಮಾನ್ಯ ತಲೆಗೆ ಗಂಭೀರ ಏಟಾಗಿತ್ತು. ಈ ಘಟನೆಗೆ ಅಂತರಜಾತಿ ವಿವಾಹವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಪೊಲೀಸರು ತಿಳಿಸಿದ್ದಾರೆ.

ಮಾನ್ಯ ಅವರ ಮಾವ ಮತ್ತು ಅತ್ತೆಗೂ ಗಾಯಗಳಾಗಿವೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಕಾಶ್ ಮತ್ತು ಅವರ ಇಬ್ಬರು ಸಂಬಂಧಿಕರನ್ನು ವಶಕ್ಕೆ ಪಡೆದಿದ್ದು, ಎಫ್‌ಐಆರ್ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

​ಮಾನ್ಯ ಪಾಟೀಲ ಇನಾಂವೀರಾಪುರ ಗ್ರಾಮದ ದಲಿತ ಸಮುದಾಯದ ಯುವಕ ವಿವೇಕಾನಂದ ದೊಡ್ಡಮನಿ ಎಂಬಾತನನ್ನು ಪ್ರೀತಿಸಿದ್ದಳು. ಈ ಮದುವೆಗೆ ಮೇಲ್ವರ್ಗಕ್ಕೆ ಸೇರಿದ ಯುವತಿಯ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಪೊಲೀಸರ ಸಮ್ಮುಖದಲ್ಲಿ ನಡೆದ ರಾಜಿ ಪಂಚಾಯಿತಿಯ ಬಳಿಕ ಏಳು ತಿಂಗಳ ಹಿಂದೆ ಇಬ್ಬರೂ ವಿವಾಹವಾಗಿದ್ದರು. ನಂತರ ಪ್ರಾಣ ಭಯದಿಂದ ಹಾವೇರಿ ಜಿಲ್ಲೆಯಲ್ಲಿ ನೆಲೆಸಿದ್ದ ದಂಪತಿ, ಡಿಸೆಂಬರ್​​ 8ರಂದು ಊರಿಗೆ ಮರಳಿದ್ದರು. ಆದರೆ, ವೈರತ್ವದ ಕಿಚ್ಚು ಹಚ್ಚಿಕೊಂಡಿದ್ದ ಯುವತಿಯ ತಂದೆ, ಚಿಕ್ಕಪ್ಪ ಹಾಗೂ ಸಹೋದರ ಭಾನುವಾರ ಸಂಜೆ ವಿವೇಕಾನಂದನ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಭೀಕರ ದಾಳಿ ನಡೆಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

10 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

16 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

22 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

23 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago