Categories: ಕೋಲಾರ

ದಲಿತ ಸಂಘಟನೆಗಳಲ್ಲಿನ ಉಪ ಜಾತಿಗಳ ವಿಂಗಡಣೆಯಿಂದ ಸಂಘಟನೆಗೆ ಹಿನ್ನಡೆ- ಹೆಣ್ಣೂರು ಶ್ರೀನಿವಾಸ್

ಕೋಲಾರ: ದಲಿತ ಸಮುದಾಯಗಳ ಮಧ್ಯೆ ಉಪ ಜಾತಿಗಳ ಸೃಷ್ಟಿ ಸೇರಿದಂತೆ ನಮ್ಮೊಳಗಿಳ ಭಿನ್ನಾಭಿಪ್ರಾಯ, ಭಿನ್ನ ಚಿಂತನೆ ಹಾಗೂ ಜಾತಿ ವ್ಯವಸ್ಥೆಯನ್ನು ಛಿದ್ರಗೊಳಿಸಿ ಸಂಘಟನೆಗಳ ಬಲ ಹಿನ್ನಡೆಯಿಂದಾಗಿ ಕೇಂದ್ರ ಸಚಿವ ಅಮಿಶ್ ಷಾ ಅಂತಹವರು ಕೂಡ ಅಂಬೇಡ್ಕರ್ ಬಗ್ಗೆ ಹೀನಾಯವಾಗಿ ಅಪಮಾನ ಮಾಡುವ ಸಂದರ್ಭ ಬಂದಿದೆ ಎಂದು ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು

ನಗರದ ನಚಿಕೇತನ ನಿಲಯದ ಬುದ್ದ ವಿಹಾರದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಸಂಘಟನೆಯ ವತಿಯಿಂದ ಜಿಲ್ಲಾ ಸಂಘಟನಾ ಸಂಚಾಲಕ ರೋಜರಪಲ್ಲಿ ವೆಂಕಟರಮಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜಕೀಯ ಇಚ್ಛಾಶಕ್ತಿಗಾಗಿ ಜಾತಿ ಜಾತಿಗಳ ಮಧ್ಯೆ ದ್ವೇಷವನ್ನು ಉಂಟು ಮಾಡಿದ್ದು ಅಲ್ಲದೇ ಜನಕ್ಕೆ ತಪ್ಪು ಸಂದೇಶಗಳನ್ನು ನೀಡಲು ಹೊರಟಿದ್ದಾರೆ ದಲಿತ ಸಂಘಟನೆಗಳು ಒಗ್ಗೂಡುವಿಕೆಯಿಂದ ಸಮಾಜದಲ್ಲಿ ಶೋಷಣೆ ದಬ್ಬಾಳಿಕೆ ತಡೆಗಟ್ಟಲು ಸಾಧ್ಯವಿದೆ ಎಂದರು.

ಶತಶತಮಾನಗಳಿಂದ ಸಮಾಜದ ಕೆಳವರ್ಗದವರು ಶೋಷಣೆಗೊಳಗಾಗುತ್ತಿದ್ದಾರೆ. ಅಧಿಕಾರ ಪಡೆಯುವ ಸಂದರ್ಭದಲ್ಲಿಯೇ ದಲಿತ ಸಮುದಾಯ ಒಡೆಯಿತು. ದಲಿತರಲ್ಲಿನ ಭಿನ್ನಾಭಿಪ್ರಾಯ ಹಾಗೂ ಅಸಹಾಯಕತೆಯಿಂದಾಗಿಯೇ ದಲಿತ ಸಂಘಟನೆ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ
ವಿವಿಧ ಕಾರಣಗಳಿಗೆ ದೂರವಾಗಿರುವ ಶೋಷಿತ ಸಮುದಾಯಗಳನ್ನು ಒಗ್ಗೂಡಿಸುವುದಕ್ಕೆ ಮೊದಲು ಆದ್ಯತೆ ನೀಡಬೇಕಿದೆ ಈ ಮೂಲಕ ಸಂಘಟನೆ ಬಲಪಡಿಸಿ ಶೋಷಿತರ ಪರ ಹೋರಾಟಕ್ಕೆ ಮುಂದಾಗಬೇಕಿದೆ. ಎಲ್ಲಿಯವರೆಗೆ ಶೋಷಿತರು ಜಾತಿ, ಉಪಜಾತಿ ವ್ಯವಸ್ಥೆಯಿಂದ ಹೊರಬರುವುದಿಲ್ಲವೋ ಅಲ್ಲಿವರೆಗೆ ಹೋರಾಟಗಳಿಗೆ ಬೆಲೆ ದೊರೆಯಲ್ಲ ಎಂದರು.

ಶೋಷಿತರ ನೋವಿಗೆ ಸ್ಪಂದಿಸುವ ಹಾಗೂ ಎಲ್ಲರನ್ನೂ ಗೌರವಿಸುವ ವಾತಾವರಣ ಬೆಳೆಯಬೇಕು. ಒಗ್ಗಟ್ಟಿನ ಹೋರಾಟವಿಲ್ಲದೇ ಅಧಿಕಾರಕ್ಕೇರುವುದು ಅಸಾಧ್ಯ ಹೃದಯವಂತಿಕೆಯ ನಾಯಕತ್ವ ಸಂಘಟನೆಗೆ ಅವಶ್ಯಕ. ಆಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ದಲಿತರ ಅಭಿವೃದ್ಧಿಗೆ ನ್ಯಾ ನಾಗಮೋಹನ್ ದಾಸ್ ಅಯೋಗದ ವರದಿಯಿಂದ ದಲಿತರ ಅಭಿವೃದ್ಧಿ ಸಾಧ್ಯ ಮನುವಾದಿ ಅಂತಹ ಮನಸ್ಥಿತಿಯನ್ನು ದೂರ ಇಡುವಂತೆ ಸಂಘಟಿತರಾಗಿ ಕೆಲಸ ಮಾಡೋಣ ಎಂದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಕಟ್ಟಿ ವೆಂಕಟರಮಣ, ರೋಜರಪಲ್ಲಿ ವೆಂಕಟರಮಣ ಅವರ ಸಹೋದರ ನಾರಾಯಣಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಗೌನಪಲ್ಲಿ ವೆಂಕಟರಮಣ, ಚವ್ವೇನಹಳ್ಳಿ ವಿಜಿ, ಮುನಿಚೌಡಪ್ಪ, ಮುದವತ್ತಿ ಕೇಶವ, ಗೋವಿಂದರಾಜು, ವೆಂಕಟೇಶ್, ಚಂದ್ರಪ್ಪ, ಕೂಸಂದ್ರ ರೆಡ್ಡೆಪ್ಪ, ಮುನಿರಾಜು, ಚಂದ್ರಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

8 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

19 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago