Categories: ಕೋಲಾರ

ದಲಿತ ಸಂಘಟನೆಗಳಲ್ಲಿನ ಉಪ ಜಾತಿಗಳ ವಿಂಗಡಣೆಯಿಂದ ಸಂಘಟನೆಗೆ ಹಿನ್ನಡೆ- ಹೆಣ್ಣೂರು ಶ್ರೀನಿವಾಸ್

ಕೋಲಾರ: ದಲಿತ ಸಮುದಾಯಗಳ ಮಧ್ಯೆ ಉಪ ಜಾತಿಗಳ ಸೃಷ್ಟಿ ಸೇರಿದಂತೆ ನಮ್ಮೊಳಗಿಳ ಭಿನ್ನಾಭಿಪ್ರಾಯ, ಭಿನ್ನ ಚಿಂತನೆ ಹಾಗೂ ಜಾತಿ ವ್ಯವಸ್ಥೆಯನ್ನು ಛಿದ್ರಗೊಳಿಸಿ ಸಂಘಟನೆಗಳ ಬಲ ಹಿನ್ನಡೆಯಿಂದಾಗಿ ಕೇಂದ್ರ ಸಚಿವ ಅಮಿಶ್ ಷಾ ಅಂತಹವರು ಕೂಡ ಅಂಬೇಡ್ಕರ್ ಬಗ್ಗೆ ಹೀನಾಯವಾಗಿ ಅಪಮಾನ ಮಾಡುವ ಸಂದರ್ಭ ಬಂದಿದೆ ಎಂದು ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು

ನಗರದ ನಚಿಕೇತನ ನಿಲಯದ ಬುದ್ದ ವಿಹಾರದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಸಂಘಟನೆಯ ವತಿಯಿಂದ ಜಿಲ್ಲಾ ಸಂಘಟನಾ ಸಂಚಾಲಕ ರೋಜರಪಲ್ಲಿ ವೆಂಕಟರಮಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜಕೀಯ ಇಚ್ಛಾಶಕ್ತಿಗಾಗಿ ಜಾತಿ ಜಾತಿಗಳ ಮಧ್ಯೆ ದ್ವೇಷವನ್ನು ಉಂಟು ಮಾಡಿದ್ದು ಅಲ್ಲದೇ ಜನಕ್ಕೆ ತಪ್ಪು ಸಂದೇಶಗಳನ್ನು ನೀಡಲು ಹೊರಟಿದ್ದಾರೆ ದಲಿತ ಸಂಘಟನೆಗಳು ಒಗ್ಗೂಡುವಿಕೆಯಿಂದ ಸಮಾಜದಲ್ಲಿ ಶೋಷಣೆ ದಬ್ಬಾಳಿಕೆ ತಡೆಗಟ್ಟಲು ಸಾಧ್ಯವಿದೆ ಎಂದರು.

ಶತಶತಮಾನಗಳಿಂದ ಸಮಾಜದ ಕೆಳವರ್ಗದವರು ಶೋಷಣೆಗೊಳಗಾಗುತ್ತಿದ್ದಾರೆ. ಅಧಿಕಾರ ಪಡೆಯುವ ಸಂದರ್ಭದಲ್ಲಿಯೇ ದಲಿತ ಸಮುದಾಯ ಒಡೆಯಿತು. ದಲಿತರಲ್ಲಿನ ಭಿನ್ನಾಭಿಪ್ರಾಯ ಹಾಗೂ ಅಸಹಾಯಕತೆಯಿಂದಾಗಿಯೇ ದಲಿತ ಸಂಘಟನೆ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ
ವಿವಿಧ ಕಾರಣಗಳಿಗೆ ದೂರವಾಗಿರುವ ಶೋಷಿತ ಸಮುದಾಯಗಳನ್ನು ಒಗ್ಗೂಡಿಸುವುದಕ್ಕೆ ಮೊದಲು ಆದ್ಯತೆ ನೀಡಬೇಕಿದೆ ಈ ಮೂಲಕ ಸಂಘಟನೆ ಬಲಪಡಿಸಿ ಶೋಷಿತರ ಪರ ಹೋರಾಟಕ್ಕೆ ಮುಂದಾಗಬೇಕಿದೆ. ಎಲ್ಲಿಯವರೆಗೆ ಶೋಷಿತರು ಜಾತಿ, ಉಪಜಾತಿ ವ್ಯವಸ್ಥೆಯಿಂದ ಹೊರಬರುವುದಿಲ್ಲವೋ ಅಲ್ಲಿವರೆಗೆ ಹೋರಾಟಗಳಿಗೆ ಬೆಲೆ ದೊರೆಯಲ್ಲ ಎಂದರು.

ಶೋಷಿತರ ನೋವಿಗೆ ಸ್ಪಂದಿಸುವ ಹಾಗೂ ಎಲ್ಲರನ್ನೂ ಗೌರವಿಸುವ ವಾತಾವರಣ ಬೆಳೆಯಬೇಕು. ಒಗ್ಗಟ್ಟಿನ ಹೋರಾಟವಿಲ್ಲದೇ ಅಧಿಕಾರಕ್ಕೇರುವುದು ಅಸಾಧ್ಯ ಹೃದಯವಂತಿಕೆಯ ನಾಯಕತ್ವ ಸಂಘಟನೆಗೆ ಅವಶ್ಯಕ. ಆಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ದಲಿತರ ಅಭಿವೃದ್ಧಿಗೆ ನ್ಯಾ ನಾಗಮೋಹನ್ ದಾಸ್ ಅಯೋಗದ ವರದಿಯಿಂದ ದಲಿತರ ಅಭಿವೃದ್ಧಿ ಸಾಧ್ಯ ಮನುವಾದಿ ಅಂತಹ ಮನಸ್ಥಿತಿಯನ್ನು ದೂರ ಇಡುವಂತೆ ಸಂಘಟಿತರಾಗಿ ಕೆಲಸ ಮಾಡೋಣ ಎಂದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಕಟ್ಟಿ ವೆಂಕಟರಮಣ, ರೋಜರಪಲ್ಲಿ ವೆಂಕಟರಮಣ ಅವರ ಸಹೋದರ ನಾರಾಯಣಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಗೌನಪಲ್ಲಿ ವೆಂಕಟರಮಣ, ಚವ್ವೇನಹಳ್ಳಿ ವಿಜಿ, ಮುನಿಚೌಡಪ್ಪ, ಮುದವತ್ತಿ ಕೇಶವ, ಗೋವಿಂದರಾಜು, ವೆಂಕಟೇಶ್, ಚಂದ್ರಪ್ಪ, ಕೂಸಂದ್ರ ರೆಡ್ಡೆಪ್ಪ, ಮುನಿರಾಜು, ಚಂದ್ರಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

48 minutes ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

13 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

13 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

14 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

19 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 day ago