Categories: ಕೋಲಾರ

ದಲಿತ ಸಂಘಟನೆಗಳಲ್ಲಿನ ಉಪ ಜಾತಿಗಳ ವಿಂಗಡಣೆಯಿಂದ ಸಂಘಟನೆಗೆ ಹಿನ್ನಡೆ- ಹೆಣ್ಣೂರು ಶ್ರೀನಿವಾಸ್

ಕೋಲಾರ: ದಲಿತ ಸಮುದಾಯಗಳ ಮಧ್ಯೆ ಉಪ ಜಾತಿಗಳ ಸೃಷ್ಟಿ ಸೇರಿದಂತೆ ನಮ್ಮೊಳಗಿಳ ಭಿನ್ನಾಭಿಪ್ರಾಯ, ಭಿನ್ನ ಚಿಂತನೆ ಹಾಗೂ ಜಾತಿ ವ್ಯವಸ್ಥೆಯನ್ನು ಛಿದ್ರಗೊಳಿಸಿ ಸಂಘಟನೆಗಳ ಬಲ ಹಿನ್ನಡೆಯಿಂದಾಗಿ ಕೇಂದ್ರ ಸಚಿವ ಅಮಿಶ್ ಷಾ ಅಂತಹವರು ಕೂಡ ಅಂಬೇಡ್ಕರ್ ಬಗ್ಗೆ ಹೀನಾಯವಾಗಿ ಅಪಮಾನ ಮಾಡುವ ಸಂದರ್ಭ ಬಂದಿದೆ ಎಂದು ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು

ನಗರದ ನಚಿಕೇತನ ನಿಲಯದ ಬುದ್ದ ವಿಹಾರದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಸಂಘಟನೆಯ ವತಿಯಿಂದ ಜಿಲ್ಲಾ ಸಂಘಟನಾ ಸಂಚಾಲಕ ರೋಜರಪಲ್ಲಿ ವೆಂಕಟರಮಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜಕೀಯ ಇಚ್ಛಾಶಕ್ತಿಗಾಗಿ ಜಾತಿ ಜಾತಿಗಳ ಮಧ್ಯೆ ದ್ವೇಷವನ್ನು ಉಂಟು ಮಾಡಿದ್ದು ಅಲ್ಲದೇ ಜನಕ್ಕೆ ತಪ್ಪು ಸಂದೇಶಗಳನ್ನು ನೀಡಲು ಹೊರಟಿದ್ದಾರೆ ದಲಿತ ಸಂಘಟನೆಗಳು ಒಗ್ಗೂಡುವಿಕೆಯಿಂದ ಸಮಾಜದಲ್ಲಿ ಶೋಷಣೆ ದಬ್ಬಾಳಿಕೆ ತಡೆಗಟ್ಟಲು ಸಾಧ್ಯವಿದೆ ಎಂದರು.

ಶತಶತಮಾನಗಳಿಂದ ಸಮಾಜದ ಕೆಳವರ್ಗದವರು ಶೋಷಣೆಗೊಳಗಾಗುತ್ತಿದ್ದಾರೆ. ಅಧಿಕಾರ ಪಡೆಯುವ ಸಂದರ್ಭದಲ್ಲಿಯೇ ದಲಿತ ಸಮುದಾಯ ಒಡೆಯಿತು. ದಲಿತರಲ್ಲಿನ ಭಿನ್ನಾಭಿಪ್ರಾಯ ಹಾಗೂ ಅಸಹಾಯಕತೆಯಿಂದಾಗಿಯೇ ದಲಿತ ಸಂಘಟನೆ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ
ವಿವಿಧ ಕಾರಣಗಳಿಗೆ ದೂರವಾಗಿರುವ ಶೋಷಿತ ಸಮುದಾಯಗಳನ್ನು ಒಗ್ಗೂಡಿಸುವುದಕ್ಕೆ ಮೊದಲು ಆದ್ಯತೆ ನೀಡಬೇಕಿದೆ ಈ ಮೂಲಕ ಸಂಘಟನೆ ಬಲಪಡಿಸಿ ಶೋಷಿತರ ಪರ ಹೋರಾಟಕ್ಕೆ ಮುಂದಾಗಬೇಕಿದೆ. ಎಲ್ಲಿಯವರೆಗೆ ಶೋಷಿತರು ಜಾತಿ, ಉಪಜಾತಿ ವ್ಯವಸ್ಥೆಯಿಂದ ಹೊರಬರುವುದಿಲ್ಲವೋ ಅಲ್ಲಿವರೆಗೆ ಹೋರಾಟಗಳಿಗೆ ಬೆಲೆ ದೊರೆಯಲ್ಲ ಎಂದರು.

ಶೋಷಿತರ ನೋವಿಗೆ ಸ್ಪಂದಿಸುವ ಹಾಗೂ ಎಲ್ಲರನ್ನೂ ಗೌರವಿಸುವ ವಾತಾವರಣ ಬೆಳೆಯಬೇಕು. ಒಗ್ಗಟ್ಟಿನ ಹೋರಾಟವಿಲ್ಲದೇ ಅಧಿಕಾರಕ್ಕೇರುವುದು ಅಸಾಧ್ಯ ಹೃದಯವಂತಿಕೆಯ ನಾಯಕತ್ವ ಸಂಘಟನೆಗೆ ಅವಶ್ಯಕ. ಆಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ದಲಿತರ ಅಭಿವೃದ್ಧಿಗೆ ನ್ಯಾ ನಾಗಮೋಹನ್ ದಾಸ್ ಅಯೋಗದ ವರದಿಯಿಂದ ದಲಿತರ ಅಭಿವೃದ್ಧಿ ಸಾಧ್ಯ ಮನುವಾದಿ ಅಂತಹ ಮನಸ್ಥಿತಿಯನ್ನು ದೂರ ಇಡುವಂತೆ ಸಂಘಟಿತರಾಗಿ ಕೆಲಸ ಮಾಡೋಣ ಎಂದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಕಟ್ಟಿ ವೆಂಕಟರಮಣ, ರೋಜರಪಲ್ಲಿ ವೆಂಕಟರಮಣ ಅವರ ಸಹೋದರ ನಾರಾಯಣಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಗೌನಪಲ್ಲಿ ವೆಂಕಟರಮಣ, ಚವ್ವೇನಹಳ್ಳಿ ವಿಜಿ, ಮುನಿಚೌಡಪ್ಪ, ಮುದವತ್ತಿ ಕೇಶವ, ಗೋವಿಂದರಾಜು, ವೆಂಕಟೇಶ್, ಚಂದ್ರಪ್ಪ, ಕೂಸಂದ್ರ ರೆಡ್ಡೆಪ್ಪ, ಮುನಿರಾಜು, ಚಂದ್ರಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

24 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago