Categories: ಕೋಲಾರ

ದಲಿತ ಸಂಘಟನೆಗಳಲ್ಲಿನ ಉಪ ಜಾತಿಗಳ ವಿಂಗಡಣೆಯಿಂದ ಸಂಘಟನೆಗೆ ಹಿನ್ನಡೆ- ಹೆಣ್ಣೂರು ಶ್ರೀನಿವಾಸ್

ಕೋಲಾರ: ದಲಿತ ಸಮುದಾಯಗಳ ಮಧ್ಯೆ ಉಪ ಜಾತಿಗಳ ಸೃಷ್ಟಿ ಸೇರಿದಂತೆ ನಮ್ಮೊಳಗಿಳ ಭಿನ್ನಾಭಿಪ್ರಾಯ, ಭಿನ್ನ ಚಿಂತನೆ ಹಾಗೂ ಜಾತಿ ವ್ಯವಸ್ಥೆಯನ್ನು ಛಿದ್ರಗೊಳಿಸಿ ಸಂಘಟನೆಗಳ ಬಲ ಹಿನ್ನಡೆಯಿಂದಾಗಿ ಕೇಂದ್ರ ಸಚಿವ ಅಮಿಶ್ ಷಾ ಅಂತಹವರು ಕೂಡ ಅಂಬೇಡ್ಕರ್ ಬಗ್ಗೆ ಹೀನಾಯವಾಗಿ ಅಪಮಾನ ಮಾಡುವ ಸಂದರ್ಭ ಬಂದಿದೆ ಎಂದು ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು

ನಗರದ ನಚಿಕೇತನ ನಿಲಯದ ಬುದ್ದ ವಿಹಾರದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಸಂಘಟನೆಯ ವತಿಯಿಂದ ಜಿಲ್ಲಾ ಸಂಘಟನಾ ಸಂಚಾಲಕ ರೋಜರಪಲ್ಲಿ ವೆಂಕಟರಮಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜಕೀಯ ಇಚ್ಛಾಶಕ್ತಿಗಾಗಿ ಜಾತಿ ಜಾತಿಗಳ ಮಧ್ಯೆ ದ್ವೇಷವನ್ನು ಉಂಟು ಮಾಡಿದ್ದು ಅಲ್ಲದೇ ಜನಕ್ಕೆ ತಪ್ಪು ಸಂದೇಶಗಳನ್ನು ನೀಡಲು ಹೊರಟಿದ್ದಾರೆ ದಲಿತ ಸಂಘಟನೆಗಳು ಒಗ್ಗೂಡುವಿಕೆಯಿಂದ ಸಮಾಜದಲ್ಲಿ ಶೋಷಣೆ ದಬ್ಬಾಳಿಕೆ ತಡೆಗಟ್ಟಲು ಸಾಧ್ಯವಿದೆ ಎಂದರು.

ಶತಶತಮಾನಗಳಿಂದ ಸಮಾಜದ ಕೆಳವರ್ಗದವರು ಶೋಷಣೆಗೊಳಗಾಗುತ್ತಿದ್ದಾರೆ. ಅಧಿಕಾರ ಪಡೆಯುವ ಸಂದರ್ಭದಲ್ಲಿಯೇ ದಲಿತ ಸಮುದಾಯ ಒಡೆಯಿತು. ದಲಿತರಲ್ಲಿನ ಭಿನ್ನಾಭಿಪ್ರಾಯ ಹಾಗೂ ಅಸಹಾಯಕತೆಯಿಂದಾಗಿಯೇ ದಲಿತ ಸಂಘಟನೆ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ
ವಿವಿಧ ಕಾರಣಗಳಿಗೆ ದೂರವಾಗಿರುವ ಶೋಷಿತ ಸಮುದಾಯಗಳನ್ನು ಒಗ್ಗೂಡಿಸುವುದಕ್ಕೆ ಮೊದಲು ಆದ್ಯತೆ ನೀಡಬೇಕಿದೆ ಈ ಮೂಲಕ ಸಂಘಟನೆ ಬಲಪಡಿಸಿ ಶೋಷಿತರ ಪರ ಹೋರಾಟಕ್ಕೆ ಮುಂದಾಗಬೇಕಿದೆ. ಎಲ್ಲಿಯವರೆಗೆ ಶೋಷಿತರು ಜಾತಿ, ಉಪಜಾತಿ ವ್ಯವಸ್ಥೆಯಿಂದ ಹೊರಬರುವುದಿಲ್ಲವೋ ಅಲ್ಲಿವರೆಗೆ ಹೋರಾಟಗಳಿಗೆ ಬೆಲೆ ದೊರೆಯಲ್ಲ ಎಂದರು.

ಶೋಷಿತರ ನೋವಿಗೆ ಸ್ಪಂದಿಸುವ ಹಾಗೂ ಎಲ್ಲರನ್ನೂ ಗೌರವಿಸುವ ವಾತಾವರಣ ಬೆಳೆಯಬೇಕು. ಒಗ್ಗಟ್ಟಿನ ಹೋರಾಟವಿಲ್ಲದೇ ಅಧಿಕಾರಕ್ಕೇರುವುದು ಅಸಾಧ್ಯ ಹೃದಯವಂತಿಕೆಯ ನಾಯಕತ್ವ ಸಂಘಟನೆಗೆ ಅವಶ್ಯಕ. ಆಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ದಲಿತರ ಅಭಿವೃದ್ಧಿಗೆ ನ್ಯಾ ನಾಗಮೋಹನ್ ದಾಸ್ ಅಯೋಗದ ವರದಿಯಿಂದ ದಲಿತರ ಅಭಿವೃದ್ಧಿ ಸಾಧ್ಯ ಮನುವಾದಿ ಅಂತಹ ಮನಸ್ಥಿತಿಯನ್ನು ದೂರ ಇಡುವಂತೆ ಸಂಘಟಿತರಾಗಿ ಕೆಲಸ ಮಾಡೋಣ ಎಂದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಕಟ್ಟಿ ವೆಂಕಟರಮಣ, ರೋಜರಪಲ್ಲಿ ವೆಂಕಟರಮಣ ಅವರ ಸಹೋದರ ನಾರಾಯಣಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಗೌನಪಲ್ಲಿ ವೆಂಕಟರಮಣ, ಚವ್ವೇನಹಳ್ಳಿ ವಿಜಿ, ಮುನಿಚೌಡಪ್ಪ, ಮುದವತ್ತಿ ಕೇಶವ, ಗೋವಿಂದರಾಜು, ವೆಂಕಟೇಶ್, ಚಂದ್ರಪ್ಪ, ಕೂಸಂದ್ರ ರೆಡ್ಡೆಪ್ಪ, ಮುನಿರಾಜು, ಚಂದ್ರಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

11 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

14 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

15 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

18 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

23 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

1 day ago