ಕೋಲಾರ: ದಲಿತ ಸಮುದಾಯಗಳ ಮಧ್ಯೆ ಉಪ ಜಾತಿಗಳ ಸೃಷ್ಟಿ ಸೇರಿದಂತೆ ನಮ್ಮೊಳಗಿಳ ಭಿನ್ನಾಭಿಪ್ರಾಯ, ಭಿನ್ನ ಚಿಂತನೆ ಹಾಗೂ ಜಾತಿ ವ್ಯವಸ್ಥೆಯನ್ನು ಛಿದ್ರಗೊಳಿಸಿ ಸಂಘಟನೆಗಳ ಬಲ ಹಿನ್ನಡೆಯಿಂದಾಗಿ ಕೇಂದ್ರ ಸಚಿವ ಅಮಿಶ್ ಷಾ ಅಂತಹವರು ಕೂಡ ಅಂಬೇಡ್ಕರ್ ಬಗ್ಗೆ ಹೀನಾಯವಾಗಿ ಅಪಮಾನ ಮಾಡುವ ಸಂದರ್ಭ ಬಂದಿದೆ ಎಂದು ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು
ನಗರದ ನಚಿಕೇತನ ನಿಲಯದ ಬುದ್ದ ವಿಹಾರದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಸಂಘಟನೆಯ ವತಿಯಿಂದ ಜಿಲ್ಲಾ ಸಂಘಟನಾ ಸಂಚಾಲಕ ರೋಜರಪಲ್ಲಿ ವೆಂಕಟರಮಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜಕೀಯ ಇಚ್ಛಾಶಕ್ತಿಗಾಗಿ ಜಾತಿ ಜಾತಿಗಳ ಮಧ್ಯೆ ದ್ವೇಷವನ್ನು ಉಂಟು ಮಾಡಿದ್ದು ಅಲ್ಲದೇ ಜನಕ್ಕೆ ತಪ್ಪು ಸಂದೇಶಗಳನ್ನು ನೀಡಲು ಹೊರಟಿದ್ದಾರೆ ದಲಿತ ಸಂಘಟನೆಗಳು ಒಗ್ಗೂಡುವಿಕೆಯಿಂದ ಸಮಾಜದಲ್ಲಿ ಶೋಷಣೆ ದಬ್ಬಾಳಿಕೆ ತಡೆಗಟ್ಟಲು ಸಾಧ್ಯವಿದೆ ಎಂದರು.
ಶತಶತಮಾನಗಳಿಂದ ಸಮಾಜದ ಕೆಳವರ್ಗದವರು ಶೋಷಣೆಗೊಳಗಾಗುತ್ತಿದ್ದಾರೆ. ಅಧಿಕಾರ ಪಡೆಯುವ ಸಂದರ್ಭದಲ್ಲಿಯೇ ದಲಿತ ಸಮುದಾಯ ಒಡೆಯಿತು. ದಲಿತರಲ್ಲಿನ ಭಿನ್ನಾಭಿಪ್ರಾಯ ಹಾಗೂ ಅಸಹಾಯಕತೆಯಿಂದಾಗಿಯೇ ದಲಿತ ಸಂಘಟನೆ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ
ವಿವಿಧ ಕಾರಣಗಳಿಗೆ ದೂರವಾಗಿರುವ ಶೋಷಿತ ಸಮುದಾಯಗಳನ್ನು ಒಗ್ಗೂಡಿಸುವುದಕ್ಕೆ ಮೊದಲು ಆದ್ಯತೆ ನೀಡಬೇಕಿದೆ ಈ ಮೂಲಕ ಸಂಘಟನೆ ಬಲಪಡಿಸಿ ಶೋಷಿತರ ಪರ ಹೋರಾಟಕ್ಕೆ ಮುಂದಾಗಬೇಕಿದೆ. ಎಲ್ಲಿಯವರೆಗೆ ಶೋಷಿತರು ಜಾತಿ, ಉಪಜಾತಿ ವ್ಯವಸ್ಥೆಯಿಂದ ಹೊರಬರುವುದಿಲ್ಲವೋ ಅಲ್ಲಿವರೆಗೆ ಹೋರಾಟಗಳಿಗೆ ಬೆಲೆ ದೊರೆಯಲ್ಲ ಎಂದರು.
ಶೋಷಿತರ ನೋವಿಗೆ ಸ್ಪಂದಿಸುವ ಹಾಗೂ ಎಲ್ಲರನ್ನೂ ಗೌರವಿಸುವ ವಾತಾವರಣ ಬೆಳೆಯಬೇಕು. ಒಗ್ಗಟ್ಟಿನ ಹೋರಾಟವಿಲ್ಲದೇ ಅಧಿಕಾರಕ್ಕೇರುವುದು ಅಸಾಧ್ಯ ಹೃದಯವಂತಿಕೆಯ ನಾಯಕತ್ವ ಸಂಘಟನೆಗೆ ಅವಶ್ಯಕ. ಆಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ದಲಿತರ ಅಭಿವೃದ್ಧಿಗೆ ನ್ಯಾ ನಾಗಮೋಹನ್ ದಾಸ್ ಅಯೋಗದ ವರದಿಯಿಂದ ದಲಿತರ ಅಭಿವೃದ್ಧಿ ಸಾಧ್ಯ ಮನುವಾದಿ ಅಂತಹ ಮನಸ್ಥಿತಿಯನ್ನು ದೂರ ಇಡುವಂತೆ ಸಂಘಟಿತರಾಗಿ ಕೆಲಸ ಮಾಡೋಣ ಎಂದರು.
ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಕಟ್ಟಿ ವೆಂಕಟರಮಣ, ರೋಜರಪಲ್ಲಿ ವೆಂಕಟರಮಣ ಅವರ ಸಹೋದರ ನಾರಾಯಣಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಗೌನಪಲ್ಲಿ ವೆಂಕಟರಮಣ, ಚವ್ವೇನಹಳ್ಳಿ ವಿಜಿ, ಮುನಿಚೌಡಪ್ಪ, ಮುದವತ್ತಿ ಕೇಶವ, ಗೋವಿಂದರಾಜು, ವೆಂಕಟೇಶ್, ಚಂದ್ರಪ್ಪ, ಕೂಸಂದ್ರ ರೆಡ್ಡೆಪ್ಪ, ಮುನಿರಾಜು, ಚಂದ್ರಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…