ದೊಡ್ಡಬಳ್ಳಾಪುರ : ತಾಲೂಕಿನ ದಲಿತರ ಹೋರಾಟಗಾರ, ಮಾದರ ಚೆನ್ನಯ್ಯ ಮಹಾಸಭಾ ಹಿರಿಯ ಕೋರ್ ಕಮಿಟಿ ಸದಸ್ಯರಾದ ಶಿರವಾರದ ಟಿ.ವೀರಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದು, ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತ ಚಳುವಳಿಯ ಭದ್ರ ಬುನಾದಿ ಹಾಕಿಕೊಟ್ಟ, ನಿಸ್ವಾರ್ಥ ಹೋರಾಟಗಾರರೆಂದೇ ಹೆಸರು ಮಾಡಿದವರು ಟಿ.ವೀರಸ್ವಾಮಿ, ರಾಜ್ಯದಲ್ಲಿ ದಲಿತ ಚಳುವಳಿಯ ಪ್ರಾರಂಭವಾದಾಗ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತರ ಮುಖಂಡರಾಗಿ ಗುರುತಿಸಿಕೊಂಡಿದ್ದರು, ದಲಿತರ ಕೊಲೆಯಾದಾಗ, ದೌರ್ಜನ್ಯವಾದಾಗ ಹೋರಾಟ ಮಾಡುವ ಮೂಲಕ ನ್ಯಾಯ ದೊರಕಿಸಿಕೊಟ್ಟಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಮೃತರ ನಿಧನಕ್ಕೆ ತಾಲೂಕಿನ ದಲಿತರ ಸಮುದಾಯದ ಮುಖಂಡರಾದ ಆದಿತ್ಯ ನಾಗೇಶ್ , ಟಿ.ಡಿ.ಮುನಿಯಪ್ಪ, ರಾಜಘಟ್ಟ ನಾರಾಯಣಸ್ವಾಮಿ, ಆರ್.ವಿ.ಮಹೇಶ್ ಕುಮಾರ್, ಅಂಜನಮೂರ್ತಿ, ರಾಮಕೃಷ್ಣಪ್ಪ, ಹಳೆಕೋಟೆ ಹನುಮಂತಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…