ದೊಡ್ಡಬಳ್ಳಾಪುರ : ತಾಲೂಕಿನ ದಲಿತರ ಹೋರಾಟಗಾರ, ಮಾದರ ಚೆನ್ನಯ್ಯ ಮಹಾಸಭಾ ಹಿರಿಯ ಕೋರ್ ಕಮಿಟಿ ಸದಸ್ಯರಾದ ಶಿರವಾರದ ಟಿ.ವೀರಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದು, ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತ ಚಳುವಳಿಯ ಭದ್ರ ಬುನಾದಿ ಹಾಕಿಕೊಟ್ಟ, ನಿಸ್ವಾರ್ಥ ಹೋರಾಟಗಾರರೆಂದೇ ಹೆಸರು ಮಾಡಿದವರು ಟಿ.ವೀರಸ್ವಾಮಿ, ರಾಜ್ಯದಲ್ಲಿ ದಲಿತ ಚಳುವಳಿಯ ಪ್ರಾರಂಭವಾದಾಗ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತರ ಮುಖಂಡರಾಗಿ ಗುರುತಿಸಿಕೊಂಡಿದ್ದರು, ದಲಿತರ ಕೊಲೆಯಾದಾಗ, ದೌರ್ಜನ್ಯವಾದಾಗ ಹೋರಾಟ ಮಾಡುವ ಮೂಲಕ ನ್ಯಾಯ ದೊರಕಿಸಿಕೊಟ್ಟಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಮೃತರ ನಿಧನಕ್ಕೆ ತಾಲೂಕಿನ ದಲಿತರ ಸಮುದಾಯದ ಮುಖಂಡರಾದ ಆದಿತ್ಯ ನಾಗೇಶ್ , ಟಿ.ಡಿ.ಮುನಿಯಪ್ಪ, ರಾಜಘಟ್ಟ ನಾರಾಯಣಸ್ವಾಮಿ, ಆರ್.ವಿ.ಮಹೇಶ್ ಕುಮಾರ್, ಅಂಜನಮೂರ್ತಿ, ರಾಮಕೃಷ್ಣಪ್ಪ, ಹಳೆಕೋಟೆ ಹನುಮಂತಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…