ದೊಡ್ಡಬಳ್ಳಾಪುರ : ತಾಲೂಕಿನ ದಲಿತರ ಹೋರಾಟಗಾರ, ಮಾದರ ಚೆನ್ನಯ್ಯ ಮಹಾಸಭಾ ಹಿರಿಯ ಕೋರ್ ಕಮಿಟಿ ಸದಸ್ಯರಾದ ಶಿರವಾರದ ಟಿ.ವೀರಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದು, ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತ ಚಳುವಳಿಯ ಭದ್ರ ಬುನಾದಿ ಹಾಕಿಕೊಟ್ಟ, ನಿಸ್ವಾರ್ಥ ಹೋರಾಟಗಾರರೆಂದೇ ಹೆಸರು ಮಾಡಿದವರು ಟಿ.ವೀರಸ್ವಾಮಿ, ರಾಜ್ಯದಲ್ಲಿ ದಲಿತ ಚಳುವಳಿಯ ಪ್ರಾರಂಭವಾದಾಗ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತರ ಮುಖಂಡರಾಗಿ ಗುರುತಿಸಿಕೊಂಡಿದ್ದರು, ದಲಿತರ ಕೊಲೆಯಾದಾಗ, ದೌರ್ಜನ್ಯವಾದಾಗ ಹೋರಾಟ ಮಾಡುವ ಮೂಲಕ ನ್ಯಾಯ ದೊರಕಿಸಿಕೊಟ್ಟಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಮೃತರ ನಿಧನಕ್ಕೆ ತಾಲೂಕಿನ ದಲಿತರ ಸಮುದಾಯದ ಮುಖಂಡರಾದ ಆದಿತ್ಯ ನಾಗೇಶ್ , ಟಿ.ಡಿ.ಮುನಿಯಪ್ಪ, ರಾಜಘಟ್ಟ ನಾರಾಯಣಸ್ವಾಮಿ, ಆರ್.ವಿ.ಮಹೇಶ್ ಕುಮಾರ್, ಅಂಜನಮೂರ್ತಿ, ರಾಮಕೃಷ್ಣಪ್ಪ, ಹಳೆಕೋಟೆ ಹನುಮಂತಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…