ದೊಡ್ಡಬಳ್ಳಾಪುರ : ತಾಲೂಕಿನ ದಲಿತರ ಹೋರಾಟಗಾರ, ಮಾದರ ಚೆನ್ನಯ್ಯ ಮಹಾಸಭಾ ಹಿರಿಯ ಕೋರ್ ಕಮಿಟಿ ಸದಸ್ಯರಾದ ಶಿರವಾರದ ಟಿ.ವೀರಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದು, ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತ ಚಳುವಳಿಯ ಭದ್ರ ಬುನಾದಿ ಹಾಕಿಕೊಟ್ಟ, ನಿಸ್ವಾರ್ಥ ಹೋರಾಟಗಾರರೆಂದೇ ಹೆಸರು ಮಾಡಿದವರು ಟಿ.ವೀರಸ್ವಾಮಿ, ರಾಜ್ಯದಲ್ಲಿ ದಲಿತ ಚಳುವಳಿಯ ಪ್ರಾರಂಭವಾದಾಗ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದಲಿತರ ಮುಖಂಡರಾಗಿ ಗುರುತಿಸಿಕೊಂಡಿದ್ದರು, ದಲಿತರ ಕೊಲೆಯಾದಾಗ, ದೌರ್ಜನ್ಯವಾದಾಗ ಹೋರಾಟ ಮಾಡುವ ಮೂಲಕ ನ್ಯಾಯ ದೊರಕಿಸಿಕೊಟ್ಟಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಮೃತರ ನಿಧನಕ್ಕೆ ತಾಲೂಕಿನ ದಲಿತರ ಸಮುದಾಯದ ಮುಖಂಡರಾದ ಆದಿತ್ಯ ನಾಗೇಶ್ , ಟಿ.ಡಿ.ಮುನಿಯಪ್ಪ, ರಾಜಘಟ್ಟ ನಾರಾಯಣಸ್ವಾಮಿ, ಆರ್.ವಿ.ಮಹೇಶ್ ಕುಮಾರ್, ಅಂಜನಮೂರ್ತಿ, ರಾಮಕೃಷ್ಣಪ್ಪ, ಹಳೆಕೋಟೆ ಹನುಮಂತಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…