Categories: ಕೋಲಾರ

ದಲಿರಿಗೆ, ರೈತರಿಗೆ, ಬಡವರಿಗೆ ಅನ್ಯಾಯ: ತಹಶಿಲ್ದಾರ್ ನಯನ ಅವಧಿಯ ಸಾಗುವಳಿ ಚೀಟಿ ಆದೇಶಗಳ ತನಿಖೆಗೆ ಒತ್ತಾಯ

ಕೋಲಾರ: ತಹಶೀಲ್ದಾ‌ರ್ ನಯನ ಅವರ ಅವಧಿಯಲ್ಲಿನ ಆರ್.ಆರ್.ಟಿ.ಕೇಸಸ್, ಆರ್.ಆರ್.ಟಿ ತಿದ್ದುಪಡಿ, ಎಲ್.ಎಸ್.ಡಿ.ಖಾತೆ, ಹಾಗೂ ಸಾಗುವಳಿ ಚೀಟಿ ಸಂಬಂಧಿಸಿದ ಎಲ್ಲಾ ಆದೇಶಗಳನ್ನು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳವಾರ ತಹಶಿಲ್ದಾರ್ ಕಛೇರಿ ಎದುರು ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್ ಮಾತನಾಡಿ ತಹಶಿಲ್ದಾರ್ ನಯನ ಅವರು ಕೋಲಾರ ತಾಲೂಕಿಗೆ ಕಳೆದ ವರ್ಷ 2024 ರ ಆಗಸ್ಟ್ ತಿಂಗಳಲ್ಲಿ ಕಾರ್ಯಭಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆವಿಗೂ ಆರ್.ಆರ್.ಟಿ ಕೇಸಸ್‌ಗಳಲ್ಲಿ ನ್ಯಾಯ ಸಮ್ಮತವಾದ ಆದೇಶಗಳನ್ನು ಮಾಡುವಲ್ಲಿ ಲೋಪವಾಗಿರುವ ಅನುಮಾನಗಳು ದಟ್ಟವಾಗಿದೆ ಆರ್.ಆರ್.ಟಿ ತಿದ್ದುಪಡಿ ಆದೇಶಗಳು ಕೆಲವು ಆಮಿಷಗಳಿಗೆ ಒಳಗಾಗಿ ಕಾನೂನಿನ ವ್ಯತಿರಿಕ್ತವಾಗಿ ಆದೇಶಗಳು ಮಾಡಿ ಸಾರ್ವಜನಿಕರು ಮತ್ತು ರೈತಾಪಿ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ ಇದರ ವಿರುದ್ದ ಒಂದು ವಾರದೊಳಗೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ಮಾಡಬೇಕು ಇಲ್ಲದೇ ಹೋದರೆ ಬೆಂಗಳೂರು ಕಛೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ರಾಜ್ಯ ಮುಖಂಡ ಮಾಲೂರು ವೆಂಕಟರಾಮ್ ಮಾತನಾಡಿ ರೈತರಿಗೆ ನೀಡುವ ಎಲ್.ಎನ್.ಡಿ.ಖಾತೆ ಮತ್ತು ಸಾಗುವಳಿ ಚೀಟಿ ವಿಭಾಗದಲ್ಲಿ ಕಾನೂನು ಉಲ್ಲಂಘನೆಯಾಗಿದ್ದು ಕಂದಾಯ ಇಲಾಖೆಯನ್ನು ಸರಿದಾರಿಗೆ ತರುವ ಸರ್ಕಾರದ ಪ್ರಯತ್ನವನ್ನು ತಹಶಿಲ್ದಾರ್ ನಯನ ಮಣ್ಣುಪಾಲು ಮಾಡಿದ್ದು ಸರ್ಕಾರಕ್ಕೆ ಮತ್ತು ಕಂದಾಯ ಇಲಾಖೆಗೆ ಕಪ್ಪುಚುಕ್ಕೆ ತಂದಿದ್ದಾರೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಅವರ ಅವಧಿಯ ಎಲ್ಲಾ ಆದೇಶಗಳನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ ಸಣ್ಣ ಕೆಲಸಕ್ಕಾಗಿ ದಿನನಿತ್ಯ ಅಲೆದರು ಕೆಲಸವಾಗಲ್ಲ ಅದೇ ಹಣವಂತರು ಬಂಡವಾಳಗಾರ ಕೆಲಸಗಳು ಮಾತ್ರ ಹೇಗೆ ಬೇಗ ಮಾಡಿಕೊಡುತ್ತಾರೆ ದಲಿತರು, ರೈತರು ಮತ್ತು ಬಡವರ ಧ್ವನಿಯಾಗಿ ಕೆಲಸ ನಿರ್ವಹಿಸಬೇಕಾದ ತಹಶಿಲ್ದಾರ್ ನಯನ ಅವರು ಕೆಲವು ಪ್ರಭಾವಿಗಳಿಗೆ ಅನುಕೂಲವಾಗುವಂತೆ ಕೆಲಸ ಮಾಡಿಕೊಡಲು ಹೊರಟಿದ್ದಾರೆ ಇಂತಹ ಅಧಿಕಾರಿಯಿಂದ ರೈತರಿಗೆ ಬಡವರಿಗೆ ದ್ರೋಹ ಮಾಡಿದ್ದಾರೆ ಕೂಡಲೇ ಇವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್ ಮಾತನಾಡಿ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ 1956 ರಲ್ಲಿ ಬಡವರಿಗಾಗಿ ಅದರಲ್ಲೂ ವಾಲ್ಮೀಕಿ ಸಮಾಜದ ಬಡವರಿಗೆ ಹಂಚಿಕೆ ಮಾಡಿದ್ದ ಹಿಡುವಳಿ ಜಮೀನನ್ನು 1977 ರಲ್ಲಿ ಹಿಂಡಿಕರಣ ಮಾಡಿ ಹೊಸ ಸರ್ವೆ ನಂಬರ್ ಕೊಟ್ಟಿದ್ದರು ಆದರೆ 2023-24 ರಲ್ಲಿ ಬ ಬೇರೆಯವರಿಗೆ ಹಕ್ಕು ಪತ್ರ ಕೊಟ್ಟು ವಾಲ್ಮೀಕಿ ಸಮಾಜಕ್ಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ವಾಲ್ಮೀಕಿ‌ ಸಮಾಜದ ಮುಖಂಡರಾದ ಕುಡುವನಹಳ್ಳಿ ಆನಂದ್, ಸಂಗೊಂಡಹಳ್ಳಿ ಪಿಳ್ಳಪ್ಪ, ಈನೆಲ ಈಜಲ ವೆಂಕಟಾಚಲಪತಿ, ಅಡ್ಡಗಲ್ ನರೇಶ್, ನರಸಿಂಹಪ್ಪ, ಬೈರಂಡಹಳ್ಳಿ ನಾಗೇಶ್, ತಿರುಮಲೇಶ್, ಕಲ್ಲಂಡೂರು ನಾರಾಯಣಸ್ವಾಮಿ, ದಿಂಬಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಅಮ್ಮೇರಹಳ್ಳಿ ಕೃಷ್ಣಪ್ಪ, ಚಲಪತಿ, ಕಲ್ವಮಂಜಲಿ ರವಿ, ದೇವರಾಜ್, ಕೃಷ್ಣಾಪುರ ನರೇಶ್, ವಕ್ಕಲೇರಿ ನಾಗೇಂದ್ರ, ರಾಜು, ಕುರಗಲ್ ವೆಂಕಟೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

4 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

7 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

11 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

12 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

18 hours ago