ಕೋಲಾರ: ತಹಶೀಲ್ದಾರ್ ನಯನ ಅವರ ಅವಧಿಯಲ್ಲಿನ ಆರ್.ಆರ್.ಟಿ.ಕೇಸಸ್, ಆರ್.ಆರ್.ಟಿ ತಿದ್ದುಪಡಿ, ಎಲ್.ಎಸ್.ಡಿ.ಖಾತೆ, ಹಾಗೂ ಸಾಗುವಳಿ ಚೀಟಿ ಸಂಬಂಧಿಸಿದ ಎಲ್ಲಾ ಆದೇಶಗಳನ್ನು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳವಾರ ತಹಶಿಲ್ದಾರ್ ಕಛೇರಿ ಎದುರು ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್ ಮಾತನಾಡಿ ತಹಶಿಲ್ದಾರ್ ನಯನ ಅವರು ಕೋಲಾರ ತಾಲೂಕಿಗೆ ಕಳೆದ ವರ್ಷ 2024 ರ ಆಗಸ್ಟ್ ತಿಂಗಳಲ್ಲಿ ಕಾರ್ಯಭಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆವಿಗೂ ಆರ್.ಆರ್.ಟಿ ಕೇಸಸ್ಗಳಲ್ಲಿ ನ್ಯಾಯ ಸಮ್ಮತವಾದ ಆದೇಶಗಳನ್ನು ಮಾಡುವಲ್ಲಿ ಲೋಪವಾಗಿರುವ ಅನುಮಾನಗಳು ದಟ್ಟವಾಗಿದೆ ಆರ್.ಆರ್.ಟಿ ತಿದ್ದುಪಡಿ ಆದೇಶಗಳು ಕೆಲವು ಆಮಿಷಗಳಿಗೆ ಒಳಗಾಗಿ ಕಾನೂನಿನ ವ್ಯತಿರಿಕ್ತವಾಗಿ ಆದೇಶಗಳು ಮಾಡಿ ಸಾರ್ವಜನಿಕರು ಮತ್ತು ರೈತಾಪಿ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ ಇದರ ವಿರುದ್ದ ಒಂದು ವಾರದೊಳಗೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ಮಾಡಬೇಕು ಇಲ್ಲದೇ ಹೋದರೆ ಬೆಂಗಳೂರು ಕಛೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ರಾಜ್ಯ ಮುಖಂಡ ಮಾಲೂರು ವೆಂಕಟರಾಮ್ ಮಾತನಾಡಿ ರೈತರಿಗೆ ನೀಡುವ ಎಲ್.ಎನ್.ಡಿ.ಖಾತೆ ಮತ್ತು ಸಾಗುವಳಿ ಚೀಟಿ ವಿಭಾಗದಲ್ಲಿ ಕಾನೂನು ಉಲ್ಲಂಘನೆಯಾಗಿದ್ದು ಕಂದಾಯ ಇಲಾಖೆಯನ್ನು ಸರಿದಾರಿಗೆ ತರುವ ಸರ್ಕಾರದ ಪ್ರಯತ್ನವನ್ನು ತಹಶಿಲ್ದಾರ್ ನಯನ ಮಣ್ಣುಪಾಲು ಮಾಡಿದ್ದು ಸರ್ಕಾರಕ್ಕೆ ಮತ್ತು ಕಂದಾಯ ಇಲಾಖೆಗೆ ಕಪ್ಪುಚುಕ್ಕೆ ತಂದಿದ್ದಾರೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಅವರ ಅವಧಿಯ ಎಲ್ಲಾ ಆದೇಶಗಳನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ ಸಣ್ಣ ಕೆಲಸಕ್ಕಾಗಿ ದಿನನಿತ್ಯ ಅಲೆದರು ಕೆಲಸವಾಗಲ್ಲ ಅದೇ ಹಣವಂತರು ಬಂಡವಾಳಗಾರ ಕೆಲಸಗಳು ಮಾತ್ರ ಹೇಗೆ ಬೇಗ ಮಾಡಿಕೊಡುತ್ತಾರೆ ದಲಿತರು, ರೈತರು ಮತ್ತು ಬಡವರ ಧ್ವನಿಯಾಗಿ ಕೆಲಸ ನಿರ್ವಹಿಸಬೇಕಾದ ತಹಶಿಲ್ದಾರ್ ನಯನ ಅವರು ಕೆಲವು ಪ್ರಭಾವಿಗಳಿಗೆ ಅನುಕೂಲವಾಗುವಂತೆ ಕೆಲಸ ಮಾಡಿಕೊಡಲು ಹೊರಟಿದ್ದಾರೆ ಇಂತಹ ಅಧಿಕಾರಿಯಿಂದ ರೈತರಿಗೆ ಬಡವರಿಗೆ ದ್ರೋಹ ಮಾಡಿದ್ದಾರೆ ಕೂಡಲೇ ಇವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್ ಮಾತನಾಡಿ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ 1956 ರಲ್ಲಿ ಬಡವರಿಗಾಗಿ ಅದರಲ್ಲೂ ವಾಲ್ಮೀಕಿ ಸಮಾಜದ ಬಡವರಿಗೆ ಹಂಚಿಕೆ ಮಾಡಿದ್ದ ಹಿಡುವಳಿ ಜಮೀನನ್ನು 1977 ರಲ್ಲಿ ಹಿಂಡಿಕರಣ ಮಾಡಿ ಹೊಸ ಸರ್ವೆ ನಂಬರ್ ಕೊಟ್ಟಿದ್ದರು ಆದರೆ 2023-24 ರಲ್ಲಿ ಬ ಬೇರೆಯವರಿಗೆ ಹಕ್ಕು ಪತ್ರ ಕೊಟ್ಟು ವಾಲ್ಮೀಕಿ ಸಮಾಜಕ್ಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರಾದ ಕುಡುವನಹಳ್ಳಿ ಆನಂದ್, ಸಂಗೊಂಡಹಳ್ಳಿ ಪಿಳ್ಳಪ್ಪ, ಈನೆಲ ಈಜಲ ವೆಂಕಟಾಚಲಪತಿ, ಅಡ್ಡಗಲ್ ನರೇಶ್, ನರಸಿಂಹಪ್ಪ, ಬೈರಂಡಹಳ್ಳಿ ನಾಗೇಶ್, ತಿರುಮಲೇಶ್, ಕಲ್ಲಂಡೂರು ನಾರಾಯಣಸ್ವಾಮಿ, ದಿಂಬಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಅಮ್ಮೇರಹಳ್ಳಿ ಕೃಷ್ಣಪ್ಪ, ಚಲಪತಿ, ಕಲ್ವಮಂಜಲಿ ರವಿ, ದೇವರಾಜ್, ಕೃಷ್ಣಾಪುರ ನರೇಶ್, ವಕ್ಕಲೇರಿ ನಾಗೇಂದ್ರ, ರಾಜು, ಕುರಗಲ್ ವೆಂಕಟೇಶ್ ಮುಂತಾದವರು ಇದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…