Categories: ಕೋಲಾರ

ದಲಿರಿಗೆ, ರೈತರಿಗೆ, ಬಡವರಿಗೆ ಅನ್ಯಾಯ: ತಹಶಿಲ್ದಾರ್ ನಯನ ಅವಧಿಯ ಸಾಗುವಳಿ ಚೀಟಿ ಆದೇಶಗಳ ತನಿಖೆಗೆ ಒತ್ತಾಯ

ಕೋಲಾರ: ತಹಶೀಲ್ದಾ‌ರ್ ನಯನ ಅವರ ಅವಧಿಯಲ್ಲಿನ ಆರ್.ಆರ್.ಟಿ.ಕೇಸಸ್, ಆರ್.ಆರ್.ಟಿ ತಿದ್ದುಪಡಿ, ಎಲ್.ಎಸ್.ಡಿ.ಖಾತೆ, ಹಾಗೂ ಸಾಗುವಳಿ ಚೀಟಿ ಸಂಬಂಧಿಸಿದ ಎಲ್ಲಾ ಆದೇಶಗಳನ್ನು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳವಾರ ತಹಶಿಲ್ದಾರ್ ಕಛೇರಿ ಎದುರು ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್ ಮಾತನಾಡಿ ತಹಶಿಲ್ದಾರ್ ನಯನ ಅವರು ಕೋಲಾರ ತಾಲೂಕಿಗೆ ಕಳೆದ ವರ್ಷ 2024 ರ ಆಗಸ್ಟ್ ತಿಂಗಳಲ್ಲಿ ಕಾರ್ಯಭಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆವಿಗೂ ಆರ್.ಆರ್.ಟಿ ಕೇಸಸ್‌ಗಳಲ್ಲಿ ನ್ಯಾಯ ಸಮ್ಮತವಾದ ಆದೇಶಗಳನ್ನು ಮಾಡುವಲ್ಲಿ ಲೋಪವಾಗಿರುವ ಅನುಮಾನಗಳು ದಟ್ಟವಾಗಿದೆ ಆರ್.ಆರ್.ಟಿ ತಿದ್ದುಪಡಿ ಆದೇಶಗಳು ಕೆಲವು ಆಮಿಷಗಳಿಗೆ ಒಳಗಾಗಿ ಕಾನೂನಿನ ವ್ಯತಿರಿಕ್ತವಾಗಿ ಆದೇಶಗಳು ಮಾಡಿ ಸಾರ್ವಜನಿಕರು ಮತ್ತು ರೈತಾಪಿ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ ಇದರ ವಿರುದ್ದ ಒಂದು ವಾರದೊಳಗೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ಮಾಡಬೇಕು ಇಲ್ಲದೇ ಹೋದರೆ ಬೆಂಗಳೂರು ಕಛೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ರಾಜ್ಯ ಮುಖಂಡ ಮಾಲೂರು ವೆಂಕಟರಾಮ್ ಮಾತನಾಡಿ ರೈತರಿಗೆ ನೀಡುವ ಎಲ್.ಎನ್.ಡಿ.ಖಾತೆ ಮತ್ತು ಸಾಗುವಳಿ ಚೀಟಿ ವಿಭಾಗದಲ್ಲಿ ಕಾನೂನು ಉಲ್ಲಂಘನೆಯಾಗಿದ್ದು ಕಂದಾಯ ಇಲಾಖೆಯನ್ನು ಸರಿದಾರಿಗೆ ತರುವ ಸರ್ಕಾರದ ಪ್ರಯತ್ನವನ್ನು ತಹಶಿಲ್ದಾರ್ ನಯನ ಮಣ್ಣುಪಾಲು ಮಾಡಿದ್ದು ಸರ್ಕಾರಕ್ಕೆ ಮತ್ತು ಕಂದಾಯ ಇಲಾಖೆಗೆ ಕಪ್ಪುಚುಕ್ಕೆ ತಂದಿದ್ದಾರೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಅವರ ಅವಧಿಯ ಎಲ್ಲಾ ಆದೇಶಗಳನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ ಸಣ್ಣ ಕೆಲಸಕ್ಕಾಗಿ ದಿನನಿತ್ಯ ಅಲೆದರು ಕೆಲಸವಾಗಲ್ಲ ಅದೇ ಹಣವಂತರು ಬಂಡವಾಳಗಾರ ಕೆಲಸಗಳು ಮಾತ್ರ ಹೇಗೆ ಬೇಗ ಮಾಡಿಕೊಡುತ್ತಾರೆ ದಲಿತರು, ರೈತರು ಮತ್ತು ಬಡವರ ಧ್ವನಿಯಾಗಿ ಕೆಲಸ ನಿರ್ವಹಿಸಬೇಕಾದ ತಹಶಿಲ್ದಾರ್ ನಯನ ಅವರು ಕೆಲವು ಪ್ರಭಾವಿಗಳಿಗೆ ಅನುಕೂಲವಾಗುವಂತೆ ಕೆಲಸ ಮಾಡಿಕೊಡಲು ಹೊರಟಿದ್ದಾರೆ ಇಂತಹ ಅಧಿಕಾರಿಯಿಂದ ರೈತರಿಗೆ ಬಡವರಿಗೆ ದ್ರೋಹ ಮಾಡಿದ್ದಾರೆ ಕೂಡಲೇ ಇವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್ ಮಾತನಾಡಿ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ 1956 ರಲ್ಲಿ ಬಡವರಿಗಾಗಿ ಅದರಲ್ಲೂ ವಾಲ್ಮೀಕಿ ಸಮಾಜದ ಬಡವರಿಗೆ ಹಂಚಿಕೆ ಮಾಡಿದ್ದ ಹಿಡುವಳಿ ಜಮೀನನ್ನು 1977 ರಲ್ಲಿ ಹಿಂಡಿಕರಣ ಮಾಡಿ ಹೊಸ ಸರ್ವೆ ನಂಬರ್ ಕೊಟ್ಟಿದ್ದರು ಆದರೆ 2023-24 ರಲ್ಲಿ ಬ ಬೇರೆಯವರಿಗೆ ಹಕ್ಕು ಪತ್ರ ಕೊಟ್ಟು ವಾಲ್ಮೀಕಿ ಸಮಾಜಕ್ಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ವಾಲ್ಮೀಕಿ‌ ಸಮಾಜದ ಮುಖಂಡರಾದ ಕುಡುವನಹಳ್ಳಿ ಆನಂದ್, ಸಂಗೊಂಡಹಳ್ಳಿ ಪಿಳ್ಳಪ್ಪ, ಈನೆಲ ಈಜಲ ವೆಂಕಟಾಚಲಪತಿ, ಅಡ್ಡಗಲ್ ನರೇಶ್, ನರಸಿಂಹಪ್ಪ, ಬೈರಂಡಹಳ್ಳಿ ನಾಗೇಶ್, ತಿರುಮಲೇಶ್, ಕಲ್ಲಂಡೂರು ನಾರಾಯಣಸ್ವಾಮಿ, ದಿಂಬಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಅಮ್ಮೇರಹಳ್ಳಿ ಕೃಷ್ಣಪ್ಪ, ಚಲಪತಿ, ಕಲ್ವಮಂಜಲಿ ರವಿ, ದೇವರಾಜ್, ಕೃಷ್ಣಾಪುರ ನರೇಶ್, ವಕ್ಕಲೇರಿ ನಾಗೇಂದ್ರ, ರಾಜು, ಕುರಗಲ್ ವೆಂಕಟೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

11 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

21 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago