Categories: ಲೇಖನ

ದಲೈಲಾಮಾ (90)…….ಉತ್ತರಾಧಿಕಾರಿಯ ಹುಡುಕಾಟದಲ್ಲಿ ಮೌಢ್ಯ…

ಜಗತ್ತಿನ ಮಾನವ ಇತಿಹಾಸದಲ್ಲಿ ಕೆಲವೇ ಕೆಲವು ಅತ್ಯುತ್ತಮ ತತ್ವಜ್ಞಾನಿಗಳಲ್ಲಿ ಭಾರತದ ಸಿದ್ದಾರ್ಥ ಎಂಬ ಗೌತಮ ಬುದ್ದ ಒಬ್ಬ.

ಅವರ ಚಿಂತನೆಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಹಜತೆ, ಅನುಭಾವಿಕತೆ, ದೇಹ ಮತ್ತು ಮನಸ್ಸುಗಳ ದಂಡನೆಯಿಂದ ಸಿಗುವ ಅನುಭವ ಎಲ್ಲವನ್ನು ಒಳಗೊಂಡ ಜೀವಪರ ನಿಲುವಿನ ಅತ್ಯಂತ ಮಾನವೀಯ ನಡೆನುಡಿಗಳು ಅಡಕವಾಗಿದೆ.

ಅಂತಹ ಬುದ್ಧರ ಚಿಂತನೆಗಳ ಪ್ರಭಾವದಿಂದ ಬೌದ್ಧ ಧರ್ಮ ವಿಶ್ವದ ಅನೇಕ ದೇಶಗಳಲ್ಲಿ ವ್ಯಾಪಕವಾಗಿ ಹರಡಿದೆ. ಚೀನಾ, ಜಪಾನ್, ಕೊರಿಯಾ, ವಿಯೆಟ್ನಾಂ, ತೈವಾನ್, ಭೂತಾನ್, ಭಾರತ, ಶ್ರೀಲಂಕಾ, ನೇಪಾಳ, ಇಂಡೋನೇಷ್ಯಾ, ಸಿಂಗಾಪುರ, ಥಾಯ್ಲೆಂಡ್, ಟಿಬೆಟ್ ಮುಂತಾದ ದೇಶಗಳಲ್ಲಿ ಬೌದ್ಧ ಧರ್ಮ ಪೂರ್ಣವಾಗಿ ಮತ್ತು ಕೆಲವು ಕಡೆ ಭಾಗಶಃ ಆಚರಣೆಯಲ್ಲಿದೆ.

ಇದೀಗ ಟಿಬೆಟ್ ನ ಧರ್ಮಗುರು ದಲೈಲಾಮ ಅವರಿಗೆ 90 ವರ್ಷ ಆದ ಸಂದರ್ಭದಲ್ಲಿ ಅವರ ಉತ್ತರಾಧಿಕಾರಿಯ ಹುಡುಕಾಟ ಪ್ರಾರಂಭವಾಗಿದೆ. ಅದರಲ್ಲಿ ವಿಶೇಷತೆ ಏನು ಎಂದರೆ, ಉತ್ತರಾಧಿಕಾರಿಯನ್ನು ಪುನರ್ಜನ್ಮದ ನಂಬಿಕೆಯ ವಿಧಾನದಲ್ಲಿ ಆಯ್ಕೆ ಮಾಡಲಾಗುತ್ತದೆ. ಅಂದರೆ ಈ ದಲೈಲಾಮಾ ಅವರ ಉತ್ತರಾಧಿಕಾರಿ ಯಾವುದೋ ಒಂದು ಪ್ರದೇಶದಲ್ಲಿ ಹುಟ್ಟುತ್ತಾರೆ. ಅವರು ಈ ದಲೈಲಾಮ ಅವರ ಮುಂದುವರಿದ ಜೀವ ಅರ್ಥಾತ್ ಪುನರ್ಜನ್ಮ ಎಂಬ ನಂಬಿಕೆ ಅವರಲ್ಲಿದೆ. ಅದನ್ನು ಅನೇಕ ವಿಧಾನಗಳ ಮೂಲಕ ಗುರುತಿಸಿ ಒಂದು ಟ್ರಸ್ಟ್ ಈ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುತ್ತದೆ.

ಜಗತ್ತಿಗೆ ಅತ್ಯಂತ ವೈಚಾರಿಕ ಚಿಂತನೆಗಳನ್ನು ನೀಡಿದ, ಮನುಷ್ಯನ ಆಸೆ, ದುಃಖ, ಕಷ್ಟ, ನೋವು, ರೋಗ ರುಜಿನ ಮುಂತಾದ ಸಮಸ್ಯೆಗಳಿಗೆ ಅತ್ಯಂತ ಸರಳ, ಸಹಜ, ವಾಸ್ತವ ಪರಿಹಾರಗಳನ್ನು ಸೂಚಿಸಿದ ಗೌತಮ ಬುದ್ಧರ ವಿಚಾರಗಳ ಆಧಾರದ ಮೇಲೆ ಬದುಕುತ್ತಿರುವ ಸಂಸ್ಕೃತಿಯ ಮುಖ್ಯಸ್ಥರು ಪುನರ್ಜನ್ಮ ಎಂಬ ನಂಬಿಕೆಗೆ ಅರ್ಹವಲ್ಲದ, ಮೌಢ್ಯ ಎಂದು ಕರೆಯಬಹುದಾದ, ವಾಸ್ತವಕ್ಕೆ ಹತ್ತಿರವಲ್ಲದ ವಿಧಾನದ ಮೂಲಕ ಉತ್ತರಾಧಿಕಾರಿಯ ಆಯ್ಕೆ ಮಾಡುವುದು
ಸೋಜಿಗವೆನಿಸುತ್ತದೆ, ಆಶ್ಚರ್ಯವಾಗುತ್ತದೆ.

ಏಕೆಂದರೆ ಬುದ್ಧ ಚಿಂತನೆಗಳು ಅತ್ಯಂತ ಸತ್ಯ, ಅಹಿಂಸೆ, ಕರುಣೆ, ತ್ಯಾಗ, ಕ್ಷಮೆ ಮುಂತಾದ ಮಾನವೀಯ ಗುಣಗಳ ಆಧಾರದ ಮೇಲೆ ರೂಪಿತವಾಗಿದೆಯೇ ಹೊರತು ಈ ರೀತಿಯ ಭ್ರಮಾತ್ಮಕ, ನಂಬಿಕೆಯ ಆಚರಣೆಗಳನ್ನಲ್ಲ. ಅಂತಹ ಸಂದರ್ಭದಲ್ಲಿ ಈ ಆಚರಣೆ ಮತ್ತು ವಿಧಾನ ಅಷ್ಟಾಗಿ ಸರಿ ಕಾಣುತ್ತಿಲ್ಲ.

ಜಗತ್ತು ಇಂದು ಸಾಗುತ್ತಿರುವ ಸಂಘರ್ಷಮಯ ವಾತಾವರಣದಲ್ಲಿ ಇಸ್ಲಾಂ, ಕ್ರಿಶ್ಚಿಯನ್, ಸನಾತನ, ಬೌದ್ಧ, ಸಿಖ್, ಜೈನ ಮುಂತಾದ ಯಾವುದೇ ಧರ್ಮಗಳು ಆದ್ಯತೆ ಕೊಡಬೇಕಾಗಿರುವುದು ಆಚರಣೆಗಳಿಗಲ್ಲ, ಪ್ರಚಾರಗಳಿಗಲ್ಲ, ವಿಸ್ತರಣೆಗಾಗಿಯಲ್ಲ, ನಿಜಕ್ಕೂ ಇಂದಿನ ಅತ್ಯವಶ್ಯಕತೆ, ಆಯಾ ಧರ್ಮದ ಚಿಂತನೆಗಳ, ತತ್ವಗಳ, ಮಾನವೀಯ ಅಂಶಗಳನ್ನು ಎತ್ತಿ ಹಿಡಿಯಬೇಕಿದೆ. ಸಂಘರ್ಷಕ್ಕೆ ಬದಲಾಗಿ ಸಂಧಾನಗಳು, ಶಾಂತಿ ಸೌಹಾರ್ದತೆಗಳು ಮುಖ್ಯವಾಗಬೇಕಿದೆ. ಅದು ಸಾಧ್ಯವಾಗಬೇಕಾದರೆ ಧರ್ಮಗಳಲ್ಲಿನ ನಾಗರಿಕ ಪ್ರಜ್ಞೆಯನ್ನು ಹೆಚ್ಚು ಪ್ರಚರಪಡಿಸಬೇಕೆ ಹೊರತು ಮೌಢ್ಯವನ್ನಲ್ಲ.

ಶಾಂತಿಗಾಗಿ ನೊಬೆಲ್ ಪ್ರಶಸ್ತಿ ಪಡೆದಿರುವ ದಲೈಲಾಮ ಅವರು ಒಂದು ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದಾರೆ. ಅವರು ಹೆಚ್ಚು ವೈಚಾರಿಕ ಪ್ರಜ್ಞೆಯನ್ನು ತನ್ನ ಅನುಯಾಯಿಗಳಲ್ಲಿ, ಹಾಗೆಯೇ ವಿಶ್ವದ ಎಲ್ಲ ಸಮುದಾಯಗಳಲ್ಲಿ ಬೆಳೆಸುವಂತಹ ಮಾತುಗಳನ್ನ ಆಡಲಿ ಎಂದು ಆಶಿಸುತ್ತಾ,

ಪುನರ್ಜನ್ಮದಲ್ಲಿ ಹುಟ್ಟುವ ಉತ್ತರಾಧಿಕಾರಿಯನ್ನು ಹುಡುಕುವುದಕ್ಕಿಂತ ಈಗ ಜೀವಿಸಿರುವ ಯಾರಾದರೂ ಅರ್ಹರನ್ನು ಹುಡುಕಿ ಆಯ್ಕೆ ಮಾಡಲಿ. ಅದು ಗೌತಮ ಬುದ್ಧರ ಚಿಂತನೆಗಳಿಗೆ ಸೂಕ್ತವಾದುದು. ಬುದ್ಧ ಪ್ರಜ್ಞೆ ಒಂದು ನಿರ್ಮಲ ಮನಸ್ಥಿತಿ. ಅದು ನಿನ್ನೆಯೂ ಅಲ್ಲ, ನಾಳೆಯೂ ಇಲ್ಲ, ಇಂದಿನ ವಾಸ್ತವಕ್ಕೆ ತೆರೆದುಕೊಂಡು ಬದುಕುವುದೇ ಆಗಿದೆ. ಸತ್ಯದ ಹುಡುಕಾಟವು ಬುದ್ಧ ಪ್ರಜ್ಞೆಯ ಒಂದು ಭಾಗ. ನೋವುಗಳಿಂದ ಮುಕ್ತವಾದ ಮನಸ್ಥಿತಿ.

ಇಂತಹ ಬುದ್ಧ ಪ್ರಜ್ಞೆಯ ಧಾರ್ಮಿಕ ಮುಖಂಡರನ್ನು ಪುನರ್ಜನ್ಮದ ಆಧಾರದಲ್ಲಿ ಆಯ್ಕೆ ಮಾಡುವುದು ಖಂಡಿತ ಸ್ವೀಕಾರಕವಲ್ಲ. ಈ ವಿಧಾನ ಬದಲಾಗಬೇಕು ಎಂದು ಬುದ್ಧ ಅನುಯಾಯಿಗಳು, ಬೌದ್ಧ ಧರ್ಮ ಪಾಲಕರು ದಲೈಲಾಮ ಅವರನ್ನು ಒತ್ತಾಯಿಸುವುದು ಸೂಕ್ತ.

ದಲೈಲಾಮ ಅವರಿಗೆ 90 ನೇ ವರ್ಷದ ಜನ್ಮದಿನದ ಶುಭಾಶಯಗಳು….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

4 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago