ತಮಿಳುನಾಡಿನ ಮುಖ್ಯಮಂತ್ರಿಯಾಗಿ ಖ್ಯಾತ ಸಿನಿಮಾನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಈ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.
ಇದೇ ವೇಳೆ ವಿಜಯ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಸಚಿವರಾಗಿ ‘ಬಸ್ಸಿ’ ಎನ್ ಆನಂದ್, ಆದವ್ ಅರ್ಜುನ, ಕೆ.ಎ. ಸೆಂಗೊಟ್ಟಯ್ಯನ್, ಕೆ.ಜಿ. ಅರುಣ್ರಾಜ್, ಪಿ. ವೆಂಕಟರಮಣನ್, ಸಿ.ಟಿ.ಆರ್. ನಿರ್ಮಲ್ ಕುಮಾರ್, ಎ. ರಾಜ್ಮೋಹನ್, ಕೀರ್ತನಾ ಹಾಗೂ ಕೆ.ಟಿ. ಪ್ರಭು ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಂದೆ-ತಾಯಿ, ನಟಿ ತ್ರಿಷಾ, ರಾಹುಲ್ ಗಾಂಧಿ, ವಿವಿಧ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಹಾಗೂ ಸಾವಿರಾರು ಅಭಿಮಾನಿಗಳು ಭಾಗಿಯಾಗಿದ್ದರು. ರಾಜಭವನದ ಸುತ್ತಮುತ್ತ ಟಿವಿಕೆ ಪಕ್ಷದ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..…
ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.…
ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.22) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್…