ದಶಕಗಳ ಬಳಿಕ‌‌ ಗ್ರಾಮದ ರಸ್ತೆಗೆ ಡಾಂಬರೀಕರಣ‌ ಭಾಗ್ಯ: ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ‌‌ಗೆ ಬ್ರೇಕ್: ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ‌ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಶಾಸಕರ ಗಮನಕ್ಕೆ ತರದೇ ಡಾಂಬರೀಕರಣ ಮಾಡಲಾಗಿದೆ ಎಂಬ ಒಂದೇ ಕಾರಣಕ್ಕೆ ಗ್ರಾ.ಪಂ.ಅಧ್ಯಕ್ಷರು ಹಾಗೂ ಕೆಲ ಬಿಜೆಪಿ ಮುಖಂಡರು ಇನ್ನೇನು ಮುಕ್ತಾಯ ಹಂತದಲ್ಲಿದ್ದ  ಕಾಮಗಾರಿ ನಿಲ್ಲಿಸಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ದೂರಾಗಿದೆ. ಆದರೆ ಈ ಆರೋಪ ನಿರಾಕರಿಸಿರುವ ಬಿಜೆಪಿ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಹನುಮಯ್ಯ ಹಾಗೂ ಇತರೆ‌ ಮುಖಂಡರು, ನಾವು ಕಾಮಗಾರಿ ತಡೆದಿಲ್ಲ.  ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು‌ ಮಾಡಿದ್ದೇವೆ. ಕಾಂಗ್ರೆಸ್ ಮುಖಂಡರ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಶನಿವಾರ ಕಾಂಗ್ರೆಸ್ ಮುಖಂಡರಾದ ಭೈರೇಗೌಡ, ಕೆ.ಪಿ.ಜಗನ್ನಾಥ್,ಮುನಿಕುಮಾರ್, ರುದ್ರಮೂರ್ತಿ ಸೇರಿ 30ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಗ್ರಾಮ ಪಂಚಾಯಿತಿ ಕಚೇರಿ ಬಳಿ ಜಮಾಯಿಸಿ, ಅಧ್ಯಕ್ಷರನ್ನು ಪ್ರಶ್ನಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಂಗಳಾಪುರ ಗ್ರಾಮದ ಮುಖಂಡ ರುದ್ರಮೂರ್ತಿ, ಕೋನೆನಹಳ್ಳಿ ಹಾಗೂ ಜ್ಯೋತಿಪುರ ಮಾರ್ಗದ 1.5ಕಿ.ಮೀ ರಸ್ತೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(KRDCL)ವತಿಯಿಂದ ಡಾಂಬರು ಹಾಕಲಾಗುತ್ತಿದೆ. ದಶಕಗಳಿಂದ ಈ ಗ್ರಾಮಗಳು ಡಾಂಬರು ಮುಖವನ್ನೇ ನೋಡಿರಲಿಲ್ಲ.   ನ.17ರಂದು ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು ಹಾಗೂ ಇತರೆ ಮುಖಂಡರು ವೃಥಾ ಕಾಮಗಾರಿ ತಡೆದಿದ್ದಾರೆ. ಪರಿಣಾಮ 200ಮೀ. ಬಾಕಿ ಇದ್ದ ಡಾಂಬರೀಕರಣ ನಿಂತು ಹೋಗಿದೆ. ಇದರಿಂದ ಮೂರು ಗ್ರಾಮಗಳ ಜನರಿಗೆ ಅನಾನುಕೂಲ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಪಕ್ಷಬೇಧ, ರಾಜಕಾರಣ ಮಾಡಬಾರದು. ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ವಿಎಸ್ ಎಸ್ ಎನ್‌ ಮಾಜಿ ಅಧ್ಯಕ್ಷ ಮುನಿಕುಮಾರ್ ಮಾತನಾಡಿ, ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಗ್ರಾಮ‌ ಪಂಚಾಯಿತಿ ಅಧ್ಯಕ್ಷ ಹನುಮಯ್ಯ ಅವರು ತೆರಳಿ, ಶಾಸಕರ ಗಮನಕ್ಕೆ ತರದೇ ಕಾಮಗಾರಿ ನಡೆಸುವಂತಿಲ್ಲ ಎಂದು ತಡೆದಿದ್ದಾರೆ. ಊರಿನ ಅಭಿವೃದ್ಧಿ‌ ವಿಚಾರದಲ್ಲಿ ಈ ರೀತಿ ಮಾಡಬಾರದು.ಎಲ್ಲ ಪಕ್ಷಗಳು ರಾಜಕೀಯ ಮರೆತು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾಮಗಾರಿಗೆ ನಾವು ಅಡ್ಡಿ ಮಾಡಿಲ್ಲ

ಕಾಂಗ್ರೆಸ್ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ‌ ಅಧ್ಯಕ್ಷ ಹನುಮಯ್ಯ ಅವರು, ರಸ್ತೆ ಡಾಂಬರೀಕರಣ‌ ಕಾಮಗಾರಿಗೆ ನಾವು ಅಡ್ಡಿಪಡಿಸಿಲ್ಲ. ಕಳಪೆ ಕಾಮಗಾರಿ ನಡೆಯುತ್ತಿದೆ‌ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಕಾಮಗಾರಿಗೆ ಅಗತ್ಯವಾದ ವಸ್ತುಗಳು ಖಾಲಿಯಾಗಿದ್ದರಿಂದ ಕೆಲಸಗಾರರು ಹೊರಟು ಹೋಗಿದ್ದರು. ಕಾಮಗಾರಿ ನಡೆಸದಂತೆ ನಾವೇನು ತಡೆದಿಲ್ಲ ಎಂದು ಹೇಳಿದರು.

ನಮಗೂ ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳು ಅಭಿವೃದ್ಧಿ ಆಗಬೇಕು. ಅದಕ್ಕೆ ನಮ್ಮ ಸಹಕಾರ ಇದ್ದೇ‌ ಇರುತ್ತದೆ, ರಸ್ತೆ ಡಾಂಬರೀಕರಣ ಗುಣಮಟ್ಟದಿಂದ ಕೂಡಿರಬೇಕು ಎಂಬುದು ನಮ್ಮ ಆಶಯ. ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ, ಪಕ್ಷಬೇಧ ನಾವು ಯಾವತ್ತೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

2 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

2 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

3 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

4 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

9 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

9 hours ago