ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಶಾಸಕರ ಗಮನಕ್ಕೆ ತರದೇ ಡಾಂಬರೀಕರಣ ಮಾಡಲಾಗಿದೆ ಎಂಬ ಒಂದೇ ಕಾರಣಕ್ಕೆ ಗ್ರಾ.ಪಂ.ಅಧ್ಯಕ್ಷರು ಹಾಗೂ ಕೆಲ ಬಿಜೆಪಿ ಮುಖಂಡರು ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ ನಿಲ್ಲಿಸಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ದೂರಾಗಿದೆ. ಆದರೆ ಈ ಆರೋಪ ನಿರಾಕರಿಸಿರುವ ಬಿಜೆಪಿ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಹನುಮಯ್ಯ ಹಾಗೂ ಇತರೆ ಮುಖಂಡರು, ನಾವು ಕಾಮಗಾರಿ ತಡೆದಿಲ್ಲ. ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದ್ದೇವೆ. ಕಾಂಗ್ರೆಸ್ ಮುಖಂಡರ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಂಗಳಾಪುರ ಗ್ರಾಮದ ಮುಖಂಡ ರುದ್ರಮೂರ್ತಿ, ಕೋನೆನಹಳ್ಳಿ ಹಾಗೂ ಜ್ಯೋತಿಪುರ ಮಾರ್ಗದ 1.5ಕಿ.ಮೀ ರಸ್ತೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(KRDCL)ವತಿಯಿಂದ ಡಾಂಬರು ಹಾಕಲಾಗುತ್ತಿದೆ. ದಶಕಗಳಿಂದ ಈ ಗ್ರಾಮಗಳು ಡಾಂಬರು ಮುಖವನ್ನೇ ನೋಡಿರಲಿಲ್ಲ. ನ.17ರಂದು ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು ಹಾಗೂ ಇತರೆ ಮುಖಂಡರು ವೃಥಾ ಕಾಮಗಾರಿ ತಡೆದಿದ್ದಾರೆ. ಪರಿಣಾಮ 200ಮೀ. ಬಾಕಿ ಇದ್ದ ಡಾಂಬರೀಕರಣ ನಿಂತು ಹೋಗಿದೆ. ಇದರಿಂದ ಮೂರು ಗ್ರಾಮಗಳ ಜನರಿಗೆ ಅನಾನುಕೂಲ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಪಕ್ಷಬೇಧ, ರಾಜಕಾರಣ ಮಾಡಬಾರದು. ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕಾಮಗಾರಿಗೆ ನಾವು ಅಡ್ಡಿ ಮಾಡಿಲ್ಲ
ಕಾಂಗ್ರೆಸ್ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಯ್ಯ ಅವರು, ರಸ್ತೆ ಡಾಂಬರೀಕರಣ ಕಾಮಗಾರಿಗೆ ನಾವು ಅಡ್ಡಿಪಡಿಸಿಲ್ಲ. ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಕಾಮಗಾರಿಗೆ ಅಗತ್ಯವಾದ ವಸ್ತುಗಳು ಖಾಲಿಯಾಗಿದ್ದರಿಂದ ಕೆಲಸಗಾರರು ಹೊರಟು ಹೋಗಿದ್ದರು. ಕಾಮಗಾರಿ ನಡೆಸದಂತೆ ನಾವೇನು ತಡೆದಿಲ್ಲ ಎಂದು ಹೇಳಿದರು.
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…