ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಶಾಸಕರ ಗಮನಕ್ಕೆ ತರದೇ ಡಾಂಬರೀಕರಣ ಮಾಡಲಾಗಿದೆ ಎಂಬ ಒಂದೇ ಕಾರಣಕ್ಕೆ ಗ್ರಾ.ಪಂ.ಅಧ್ಯಕ್ಷರು ಹಾಗೂ ಕೆಲ ಬಿಜೆಪಿ ಮುಖಂಡರು ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ ನಿಲ್ಲಿಸಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ದೂರಾಗಿದೆ. ಆದರೆ ಈ ಆರೋಪ ನಿರಾಕರಿಸಿರುವ ಬಿಜೆಪಿ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಹನುಮಯ್ಯ ಹಾಗೂ ಇತರೆ ಮುಖಂಡರು, ನಾವು ಕಾಮಗಾರಿ ತಡೆದಿಲ್ಲ. ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದ್ದೇವೆ. ಕಾಂಗ್ರೆಸ್ ಮುಖಂಡರ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಂಗಳಾಪುರ ಗ್ರಾಮದ ಮುಖಂಡ ರುದ್ರಮೂರ್ತಿ, ಕೋನೆನಹಳ್ಳಿ ಹಾಗೂ ಜ್ಯೋತಿಪುರ ಮಾರ್ಗದ 1.5ಕಿ.ಮೀ ರಸ್ತೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(KRDCL)ವತಿಯಿಂದ ಡಾಂಬರು ಹಾಕಲಾಗುತ್ತಿದೆ. ದಶಕಗಳಿಂದ ಈ ಗ್ರಾಮಗಳು ಡಾಂಬರು ಮುಖವನ್ನೇ ನೋಡಿರಲಿಲ್ಲ. ನ.17ರಂದು ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು ಹಾಗೂ ಇತರೆ ಮುಖಂಡರು ವೃಥಾ ಕಾಮಗಾರಿ ತಡೆದಿದ್ದಾರೆ. ಪರಿಣಾಮ 200ಮೀ. ಬಾಕಿ ಇದ್ದ ಡಾಂಬರೀಕರಣ ನಿಂತು ಹೋಗಿದೆ. ಇದರಿಂದ ಮೂರು ಗ್ರಾಮಗಳ ಜನರಿಗೆ ಅನಾನುಕೂಲ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಪಕ್ಷಬೇಧ, ರಾಜಕಾರಣ ಮಾಡಬಾರದು. ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕಾಮಗಾರಿಗೆ ನಾವು ಅಡ್ಡಿ ಮಾಡಿಲ್ಲ
ಕಾಂಗ್ರೆಸ್ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಯ್ಯ ಅವರು, ರಸ್ತೆ ಡಾಂಬರೀಕರಣ ಕಾಮಗಾರಿಗೆ ನಾವು ಅಡ್ಡಿಪಡಿಸಿಲ್ಲ. ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಕಾಮಗಾರಿಗೆ ಅಗತ್ಯವಾದ ವಸ್ತುಗಳು ಖಾಲಿಯಾಗಿದ್ದರಿಂದ ಕೆಲಸಗಾರರು ಹೊರಟು ಹೋಗಿದ್ದರು. ಕಾಮಗಾರಿ ನಡೆಸದಂತೆ ನಾವೇನು ತಡೆದಿಲ್ಲ ಎಂದು ಹೇಳಿದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…