ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಶಾಸಕರ ಗಮನಕ್ಕೆ ತರದೇ ಡಾಂಬರೀಕರಣ ಮಾಡಲಾಗಿದೆ ಎಂಬ ಒಂದೇ ಕಾರಣಕ್ಕೆ ಗ್ರಾ.ಪಂ.ಅಧ್ಯಕ್ಷರು ಹಾಗೂ ಕೆಲ ಬಿಜೆಪಿ ಮುಖಂಡರು ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ ನಿಲ್ಲಿಸಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ದೂರಾಗಿದೆ. ಆದರೆ ಈ ಆರೋಪ ನಿರಾಕರಿಸಿರುವ ಬಿಜೆಪಿ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಹನುಮಯ್ಯ ಹಾಗೂ ಇತರೆ ಮುಖಂಡರು, ನಾವು ಕಾಮಗಾರಿ ತಡೆದಿಲ್ಲ. ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದ್ದೇವೆ. ಕಾಂಗ್ರೆಸ್ ಮುಖಂಡರ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಂಗಳಾಪುರ ಗ್ರಾಮದ ಮುಖಂಡ ರುದ್ರಮೂರ್ತಿ, ಕೋನೆನಹಳ್ಳಿ ಹಾಗೂ ಜ್ಯೋತಿಪುರ ಮಾರ್ಗದ 1.5ಕಿ.ಮೀ ರಸ್ತೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(KRDCL)ವತಿಯಿಂದ ಡಾಂಬರು ಹಾಕಲಾಗುತ್ತಿದೆ. ದಶಕಗಳಿಂದ ಈ ಗ್ರಾಮಗಳು ಡಾಂಬರು ಮುಖವನ್ನೇ ನೋಡಿರಲಿಲ್ಲ. ನ.17ರಂದು ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು ಹಾಗೂ ಇತರೆ ಮುಖಂಡರು ವೃಥಾ ಕಾಮಗಾರಿ ತಡೆದಿದ್ದಾರೆ. ಪರಿಣಾಮ 200ಮೀ. ಬಾಕಿ ಇದ್ದ ಡಾಂಬರೀಕರಣ ನಿಂತು ಹೋಗಿದೆ. ಇದರಿಂದ ಮೂರು ಗ್ರಾಮಗಳ ಜನರಿಗೆ ಅನಾನುಕೂಲ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಪಕ್ಷಬೇಧ, ರಾಜಕಾರಣ ಮಾಡಬಾರದು. ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕಾಮಗಾರಿಗೆ ನಾವು ಅಡ್ಡಿ ಮಾಡಿಲ್ಲ
ಕಾಂಗ್ರೆಸ್ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಯ್ಯ ಅವರು, ರಸ್ತೆ ಡಾಂಬರೀಕರಣ ಕಾಮಗಾರಿಗೆ ನಾವು ಅಡ್ಡಿಪಡಿಸಿಲ್ಲ. ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಕಾಮಗಾರಿಗೆ ಅಗತ್ಯವಾದ ವಸ್ತುಗಳು ಖಾಲಿಯಾಗಿದ್ದರಿಂದ ಕೆಲಸಗಾರರು ಹೊರಟು ಹೋಗಿದ್ದರು. ಕಾಮಗಾರಿ ನಡೆಸದಂತೆ ನಾವೇನು ತಡೆದಿಲ್ಲ ಎಂದು ಹೇಳಿದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…