ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಶಾಸಕರ ಗಮನಕ್ಕೆ ತರದೇ ಡಾಂಬರೀಕರಣ ಮಾಡಲಾಗಿದೆ ಎಂಬ ಒಂದೇ ಕಾರಣಕ್ಕೆ ಗ್ರಾ.ಪಂ.ಅಧ್ಯಕ್ಷರು ಹಾಗೂ ಕೆಲ ಬಿಜೆಪಿ ಮುಖಂಡರು ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ ನಿಲ್ಲಿಸಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ದೂರಾಗಿದೆ. ಆದರೆ ಈ ಆರೋಪ ನಿರಾಕರಿಸಿರುವ ಬಿಜೆಪಿ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಹನುಮಯ್ಯ ಹಾಗೂ ಇತರೆ ಮುಖಂಡರು, ನಾವು ಕಾಮಗಾರಿ ತಡೆದಿಲ್ಲ. ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದ್ದೇವೆ. ಕಾಂಗ್ರೆಸ್ ಮುಖಂಡರ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಂಗಳಾಪುರ ಗ್ರಾಮದ ಮುಖಂಡ ರುದ್ರಮೂರ್ತಿ, ಕೋನೆನಹಳ್ಳಿ ಹಾಗೂ ಜ್ಯೋತಿಪುರ ಮಾರ್ಗದ 1.5ಕಿ.ಮೀ ರಸ್ತೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(KRDCL)ವತಿಯಿಂದ ಡಾಂಬರು ಹಾಕಲಾಗುತ್ತಿದೆ. ದಶಕಗಳಿಂದ ಈ ಗ್ರಾಮಗಳು ಡಾಂಬರು ಮುಖವನ್ನೇ ನೋಡಿರಲಿಲ್ಲ. ನ.17ರಂದು ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು ಹಾಗೂ ಇತರೆ ಮುಖಂಡರು ವೃಥಾ ಕಾಮಗಾರಿ ತಡೆದಿದ್ದಾರೆ. ಪರಿಣಾಮ 200ಮೀ. ಬಾಕಿ ಇದ್ದ ಡಾಂಬರೀಕರಣ ನಿಂತು ಹೋಗಿದೆ. ಇದರಿಂದ ಮೂರು ಗ್ರಾಮಗಳ ಜನರಿಗೆ ಅನಾನುಕೂಲ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಪಕ್ಷಬೇಧ, ರಾಜಕಾರಣ ಮಾಡಬಾರದು. ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕಾಮಗಾರಿಗೆ ನಾವು ಅಡ್ಡಿ ಮಾಡಿಲ್ಲ
ಕಾಂಗ್ರೆಸ್ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಯ್ಯ ಅವರು, ರಸ್ತೆ ಡಾಂಬರೀಕರಣ ಕಾಮಗಾರಿಗೆ ನಾವು ಅಡ್ಡಿಪಡಿಸಿಲ್ಲ. ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಕಾಮಗಾರಿಗೆ ಅಗತ್ಯವಾದ ವಸ್ತುಗಳು ಖಾಲಿಯಾಗಿದ್ದರಿಂದ ಕೆಲಸಗಾರರು ಹೊರಟು ಹೋಗಿದ್ದರು. ಕಾಮಗಾರಿ ನಡೆಸದಂತೆ ನಾವೇನು ತಡೆದಿಲ್ಲ ಎಂದು ಹೇಳಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…