ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಶಾಸಕರ ಗಮನಕ್ಕೆ ತರದೇ ಡಾಂಬರೀಕರಣ ಮಾಡಲಾಗಿದೆ ಎಂಬ ಒಂದೇ ಕಾರಣಕ್ಕೆ ಗ್ರಾ.ಪಂ.ಅಧ್ಯಕ್ಷರು ಹಾಗೂ ಕೆಲ ಬಿಜೆಪಿ ಮುಖಂಡರು ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ ನಿಲ್ಲಿಸಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ದೂರಾಗಿದೆ. ಆದರೆ ಈ ಆರೋಪ ನಿರಾಕರಿಸಿರುವ ಬಿಜೆಪಿ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಹನುಮಯ್ಯ ಹಾಗೂ ಇತರೆ ಮುಖಂಡರು, ನಾವು ಕಾಮಗಾರಿ ತಡೆದಿಲ್ಲ. ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದ್ದೇವೆ. ಕಾಂಗ್ರೆಸ್ ಮುಖಂಡರ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಂಗಳಾಪುರ ಗ್ರಾಮದ ಮುಖಂಡ ರುದ್ರಮೂರ್ತಿ, ಕೋನೆನಹಳ್ಳಿ ಹಾಗೂ ಜ್ಯೋತಿಪುರ ಮಾರ್ಗದ 1.5ಕಿ.ಮೀ ರಸ್ತೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(KRDCL)ವತಿಯಿಂದ ಡಾಂಬರು ಹಾಕಲಾಗುತ್ತಿದೆ. ದಶಕಗಳಿಂದ ಈ ಗ್ರಾಮಗಳು ಡಾಂಬರು ಮುಖವನ್ನೇ ನೋಡಿರಲಿಲ್ಲ. ನ.17ರಂದು ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು ಹಾಗೂ ಇತರೆ ಮುಖಂಡರು ವೃಥಾ ಕಾಮಗಾರಿ ತಡೆದಿದ್ದಾರೆ. ಪರಿಣಾಮ 200ಮೀ. ಬಾಕಿ ಇದ್ದ ಡಾಂಬರೀಕರಣ ನಿಂತು ಹೋಗಿದೆ. ಇದರಿಂದ ಮೂರು ಗ್ರಾಮಗಳ ಜನರಿಗೆ ಅನಾನುಕೂಲ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಪಕ್ಷಬೇಧ, ರಾಜಕಾರಣ ಮಾಡಬಾರದು. ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕಾಮಗಾರಿಗೆ ನಾವು ಅಡ್ಡಿ ಮಾಡಿಲ್ಲ
ಕಾಂಗ್ರೆಸ್ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಯ್ಯ ಅವರು, ರಸ್ತೆ ಡಾಂಬರೀಕರಣ ಕಾಮಗಾರಿಗೆ ನಾವು ಅಡ್ಡಿಪಡಿಸಿಲ್ಲ. ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಕಾಮಗಾರಿಗೆ ಅಗತ್ಯವಾದ ವಸ್ತುಗಳು ಖಾಲಿಯಾಗಿದ್ದರಿಂದ ಕೆಲಸಗಾರರು ಹೊರಟು ಹೋಗಿದ್ದರು. ಕಾಮಗಾರಿ ನಡೆಸದಂತೆ ನಾವೇನು ತಡೆದಿಲ್ಲ ಎಂದು ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…