ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನೇನಹಳ್ಳಿ-ಕಂಗಳಾಪುರ- ಜ್ಯೋತಿಪುರ ನಡುವಿನ ರಸ್ತೆ ಡಾಂಬರೀಕರಣ ಕಾಮಗಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಪರಸ್ಪರ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಶಾಸಕರ ಗಮನಕ್ಕೆ ತರದೇ ಡಾಂಬರೀಕರಣ ಮಾಡಲಾಗಿದೆ ಎಂಬ ಒಂದೇ ಕಾರಣಕ್ಕೆ ಗ್ರಾ.ಪಂ.ಅಧ್ಯಕ್ಷರು ಹಾಗೂ ಕೆಲ ಬಿಜೆಪಿ ಮುಖಂಡರು ಇನ್ನೇನು ಮುಕ್ತಾಯ ಹಂತದಲ್ಲಿದ್ದ ಕಾಮಗಾರಿ ನಿಲ್ಲಿಸಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ದೂರಾಗಿದೆ. ಆದರೆ ಈ ಆರೋಪ ನಿರಾಕರಿಸಿರುವ ಬಿಜೆಪಿ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಹನುಮಯ್ಯ ಹಾಗೂ ಇತರೆ ಮುಖಂಡರು, ನಾವು ಕಾಮಗಾರಿ ತಡೆದಿಲ್ಲ. ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದ್ದೇವೆ. ಕಾಂಗ್ರೆಸ್ ಮುಖಂಡರ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಂಗಳಾಪುರ ಗ್ರಾಮದ ಮುಖಂಡ ರುದ್ರಮೂರ್ತಿ, ಕೋನೆನಹಳ್ಳಿ ಹಾಗೂ ಜ್ಯೋತಿಪುರ ಮಾರ್ಗದ 1.5ಕಿ.ಮೀ ರಸ್ತೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(KRDCL)ವತಿಯಿಂದ ಡಾಂಬರು ಹಾಕಲಾಗುತ್ತಿದೆ. ದಶಕಗಳಿಂದ ಈ ಗ್ರಾಮಗಳು ಡಾಂಬರು ಮುಖವನ್ನೇ ನೋಡಿರಲಿಲ್ಲ. ನ.17ರಂದು ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು ಹಾಗೂ ಇತರೆ ಮುಖಂಡರು ವೃಥಾ ಕಾಮಗಾರಿ ತಡೆದಿದ್ದಾರೆ. ಪರಿಣಾಮ 200ಮೀ. ಬಾಕಿ ಇದ್ದ ಡಾಂಬರೀಕರಣ ನಿಂತು ಹೋಗಿದೆ. ಇದರಿಂದ ಮೂರು ಗ್ರಾಮಗಳ ಜನರಿಗೆ ಅನಾನುಕೂಲ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಪಕ್ಷಬೇಧ, ರಾಜಕಾರಣ ಮಾಡಬಾರದು. ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕಾಮಗಾರಿಗೆ ನಾವು ಅಡ್ಡಿ ಮಾಡಿಲ್ಲ
ಕಾಂಗ್ರೆಸ್ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಯ್ಯ ಅವರು, ರಸ್ತೆ ಡಾಂಬರೀಕರಣ ಕಾಮಗಾರಿಗೆ ನಾವು ಅಡ್ಡಿಪಡಿಸಿಲ್ಲ. ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಕಾಮಗಾರಿಗೆ ಅಗತ್ಯವಾದ ವಸ್ತುಗಳು ಖಾಲಿಯಾಗಿದ್ದರಿಂದ ಕೆಲಸಗಾರರು ಹೊರಟು ಹೋಗಿದ್ದರು. ಕಾಮಗಾರಿ ನಡೆಸದಂತೆ ನಾವೇನು ತಡೆದಿಲ್ಲ ಎಂದು ಹೇಳಿದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…