ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ನಡೆದಿದೆ.
ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಸಲಗ ಮೇಲೆ ಎರಗಿಬಿದ್ದಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.
ಹಾಸನದ ಸಕಲೇಶಪುರ, ಆಲೂರು, ಬೇಲೂರು ಮತ್ತು ಯಸ್ಲೂರು ವ್ಯಾಪ್ತಿಗಳಲ್ಲಿ ತೊಂದರೆಗೀಡಾದ ಹಾಗೂ ತೊಂದರೆ ಮಾಡುವ ಆನೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಕಾಡಾನೆಯೊಂದು ಅರ್ಜುನನ ಮೇಲೆ ದಾಳಿ ಮಾಡಿತು, ಕಾಡೆನೆ ಕಾಳಗದಲ್ಲಿ ಅರ್ಜುನನ ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿವೆ. ಕಾಡಾನೆಯು ಇತರ ನಾಲ್ಕು ಜಂಬೋಗಳನ್ನು ಓಡಿಸಿದಾಗ, ಮೂರು ಓಡಿಹೋದವು ಆದರೆ ಅರ್ಜುನನು ನಿಂತು ಹೋರಾಡಿದನು.
ದ್ರೋಣ, ಬಲರಾಮ ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಸೂಕ್ತ ತರಬೇತಿ ನೀಡುವ ಮೂಲಕ 2012 ರಿಂದ 2019 ರವರೆಗೆ ಅರ್ಜುನನಿಗೆ ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…