ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ನಡೆದಿದೆ.
ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಸಲಗ ಮೇಲೆ ಎರಗಿಬಿದ್ದಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.
ಹಾಸನದ ಸಕಲೇಶಪುರ, ಆಲೂರು, ಬೇಲೂರು ಮತ್ತು ಯಸ್ಲೂರು ವ್ಯಾಪ್ತಿಗಳಲ್ಲಿ ತೊಂದರೆಗೀಡಾದ ಹಾಗೂ ತೊಂದರೆ ಮಾಡುವ ಆನೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಕಾಡಾನೆಯೊಂದು ಅರ್ಜುನನ ಮೇಲೆ ದಾಳಿ ಮಾಡಿತು, ಕಾಡೆನೆ ಕಾಳಗದಲ್ಲಿ ಅರ್ಜುನನ ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿವೆ. ಕಾಡಾನೆಯು ಇತರ ನಾಲ್ಕು ಜಂಬೋಗಳನ್ನು ಓಡಿಸಿದಾಗ, ಮೂರು ಓಡಿಹೋದವು ಆದರೆ ಅರ್ಜುನನು ನಿಂತು ಹೋರಾಡಿದನು.
ದ್ರೋಣ, ಬಲರಾಮ ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಸೂಕ್ತ ತರಬೇತಿ ನೀಡುವ ಮೂಲಕ 2012 ರಿಂದ 2019 ರವರೆಗೆ ಅರ್ಜುನನಿಗೆ ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…