ಚಿಕ್ಕಬಳ್ಳಾಪುರ : ದಸರಾ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ಈಜಲು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸಂಭವಿಸಿದೆ.
ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಕೆರೆಯಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಘಟನೆಯಲ್ಲಿ ವಿಷ್ಣು (14), ನಿಹಾಲ್ ರಾಜ್ (12), ಹರ್ಷವರ್ಧನ್ (16) ಸಾವನ್ನಪ್ಪಿದ್ದಾರೆ, ಮೃತ ಬಾಲಕರು ಆಚೇಪಲ್ಲಿ ಗ್ರಾಮದವರು, ಮಳೆಯಿಂದ ಕೆರೆಯಲ್ಲಿ ನೀರು ಬಂದ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ ವೇಳೆ ದುರ್ಘಟನೆ ಸಂಭವಿಸಿದೆ.
ಮೊದಲಿಗೆ ವಿಷ್ಣು ಮತ್ತು ನಿಹಾಲ್ ರಾಜ್ ಕೆರೆಯಲ್ಲಿ ಈಜುತ್ತಿದ್ದ ವೇಳೆ ಮುಳುಗಲು ಪ್ರಾರಂಭಿಸಿದ್ದಾರೆ, ಅವರನ್ನು ರಕ್ಷಿಸಲು ಹೋದ ಹರ್ಷವರ್ಧನ್ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆಂದು ಸ್ಥಳೀಯರು ಮಾಹಿತಿ ತಿಳಿಸಿದ್ದಾರೆ.
ಮೃತ ದೇಹಗಳನ್ನ ಬಾಗೇಪಲ್ಲಿ ಆಸ್ಪತ್ರೆಯ ಶವಗಾರಕ್ಕೆ ಕಳಿಸಲಾಗಿದ್ದು, ಆಸ್ಪತ್ರೆಯ ಮುಂದೆ ಮೃತ ಬಾಲಕರ ಕುಟುಂಬಸ್ಥರ ಅಕ್ರಂಧನ ಮುಗಿಲು ಮುಟ್ಟಿತ್ತು, ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…