ಚಿಕ್ಕಬಳ್ಳಾಪುರ : ದಸರಾ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ಈಜಲು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸಂಭವಿಸಿದೆ.
ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಕೆರೆಯಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಘಟನೆಯಲ್ಲಿ ವಿಷ್ಣು (14), ನಿಹಾಲ್ ರಾಜ್ (12), ಹರ್ಷವರ್ಧನ್ (16) ಸಾವನ್ನಪ್ಪಿದ್ದಾರೆ, ಮೃತ ಬಾಲಕರು ಆಚೇಪಲ್ಲಿ ಗ್ರಾಮದವರು, ಮಳೆಯಿಂದ ಕೆರೆಯಲ್ಲಿ ನೀರು ಬಂದ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ ವೇಳೆ ದುರ್ಘಟನೆ ಸಂಭವಿಸಿದೆ.
ಮೊದಲಿಗೆ ವಿಷ್ಣು ಮತ್ತು ನಿಹಾಲ್ ರಾಜ್ ಕೆರೆಯಲ್ಲಿ ಈಜುತ್ತಿದ್ದ ವೇಳೆ ಮುಳುಗಲು ಪ್ರಾರಂಭಿಸಿದ್ದಾರೆ, ಅವರನ್ನು ರಕ್ಷಿಸಲು ಹೋದ ಹರ್ಷವರ್ಧನ್ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆಂದು ಸ್ಥಳೀಯರು ಮಾಹಿತಿ ತಿಳಿಸಿದ್ದಾರೆ.
ಮೃತ ದೇಹಗಳನ್ನ ಬಾಗೇಪಲ್ಲಿ ಆಸ್ಪತ್ರೆಯ ಶವಗಾರಕ್ಕೆ ಕಳಿಸಲಾಗಿದ್ದು, ಆಸ್ಪತ್ರೆಯ ಮುಂದೆ ಮೃತ ಬಾಲಕರ ಕುಟುಂಬಸ್ಥರ ಅಕ್ರಂಧನ ಮುಗಿಲು ಮುಟ್ಟಿತ್ತು, ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…
ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…