Categories: ವೈರಲ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದೀಗ ಈ ಜೋಡಿ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಇದೀಗ ಫೋಟೋ ಹಂಚಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಪೋಸ್ಟ್‌ನಲ್ಲೇನಿದೆ?

“ಒಂದು ದಿನ ನಾನು ಆಕೆಯನ್ನು ತುಂಬಾ ಮಿಸ್ ಮಾಡಿಕೊಂಡೆ. ಆಕೆ ನನ್ನ ಜೊತೆಗಿದ್ದರೆ ನನ್ನ ದಿನ ಇನ್ನೂ ಚೆನ್ನಾಗಿರುತ್ತಿತ್ತು, ಅವಳು ಎದುರಿಗೆ ಕುಳಿತಿದ್ದರೆ ನಾನು ಮಾಡುವ ಊಟಕ್ಕೆ ಒಂದು ಅರ್ಥ ಸಿಗುತ್ತಿತ್ತು. ನನ್ನ ಜೀವನಕ್ಕೆ ನೆಮ್ಮದಿ ಮತ್ತು ಮನೆ ಎಂಬ ಭಾವ ನೀಡಲು ಅವಳು ಬೇಕೇ ಎಂದು ನನಗೆ ಅನಿಸುತ್ತಿತ್ತು. ಆದ್ದರಿಂದ ನನ್ನ ಅತ್ಯುತ್ತಮ ಗೆಳತಿಯನ್ನು… ನನ್ನ ಹೆಂಡತಿಯನ್ನಾಗಿ ಮಾಡಿಕೊಂಡೆ. 26.02.2026.” ಎಂದು ಲವ್‌ ಮತ್ತು ಸ್ಮೈಲ್‌ ಇಮೋಜಿಯೊಂದಿಗೆ ಬರೆದುಕೊಂಡು ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಪೋಸ್ಟ್‌ನಲ್ಲೇನಿದೆ?

ಈಗ ನಿಮಗಾಗಿ ನನ್ನ ಪತಿಯನ್ನು ಪರಿಚಯಿಸುತ್ತಿದ್ದೇನೆ, ಶ್ರೀ ವಿಜಯ್ ದೇವರಕೊಂಡ ನಿಜವಾದ ಪ್ರೀತಿ ಎಂದರೆ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ ಇವರು. ಮನಸ್ಸಿನ ನೆಮ್ಮದಿ ಎಂದರೆ ಏನು ಎಂಬುದನ್ನು ನನಗೆ ತೋರಿಸಿಕೊಟ್ಟವರು. ದೊಡ್ಡದಾಗಿ ಕನಸು ಕಾಣುವುದು ತಪ್ಪಲ್ಲ ಎಂದು ಪ್ರತಿದಿನ ನನಗೆ ಹೇಳುತ್ತಾ, ನಾನು ಊಹಿಸಿರುವುದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುವ ಸಾಮರ್ಥ್ಯವನ್ನು ನನಗೆ ನೆನಪಿಸಿ ಸದಾ ಬೆಂಬಲವಾಗಿ ನಿಂತ ವ್ಯಕ್ತಿ,” ಎಂದು ಬರೆದುಕೊಂಡಿದ್ದಾರೆ.

“ನಾನು ಯಾವಾಗಲೂ ಯಾವ ರೀತಿಯ ಹೆಣ್ಣಾಗಬೇಕೆಂದು ಕನಸು ಕಂಡಿದ್ದೆನೋ, ಇಂದು ಅಂತಹವಳೇ ಆಗಿದ್ದೇನೆ. ಯಾಕೆಂದರೆ ನೀನು ಇಂದು ಈ ಮಟ್ಟಕ್ಕೆ ರೂಪಿಸಿದ್ದೀಯ. ನಾನು ನಿಜವಾಗಿಯೂ ಧನ್ಯಳಾಗಿದ್ದೇನೆ. “ವಿಜ್ಜು, ನಿನ್ನ ಮೇಲಿರುವ ನನ್ನ ಭಾವನೆಗಳನ್ನು ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಇದನ್ನು ನಾನು ನಿನಗೆ ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ,” ಎಂದು ಬರೆದುಕೊಂಡಿದ್ದಾರೆ.

ಆದರೆ, ಇದ್ದಕ್ಕಿದ್ದಂತೆ ನನ್ನೆಲ್ಲಾ ಸಾಧನೆಗಳು, ಹೋರಾಟಗಳು, ಸುಖ-ದುಃಖಗಳು, ಸಂಭ್ರಮಗಳು ಮತ್ತು ನನ್ನ ಇಡೀ ಜೀವನ ಇವೆಲ್ಲದಕ್ಕೂ ಈಗ ಒಂದು ಪರಿಪೂರ್ಣ ಅರ್ಥ ಸಿಕ್ಕಂತಿದೆ. ಯಾಕೆಂದರೆ ಈಗ ನೀನು ನನ್ನ ಜೊತೆಗಿದ್ದೀಯಾ. ಇವೆಲ್ಲವನ್ನೂ ಹತ್ತಿರದಿಂದ ನೋಡುತ್ತಾ, ನನ್ನ ಬದುಕಿನ ಅತಿದೊಡ್ಡ ಭಾಗವಾಗಿದ್ದೀಯಾ. ನಿನ್ನ ಪತ್ನಿಯಾಗುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ನಿನ್ನ ಹೆಂಡತಿಯಾಗಲು, ನಿನ್ನ ಹೆಂಡತಿ ಎಂದು ಕರೆಸಿಕೊಳ್ಳಲು ನಾನು ಕಾತರಳಾಗಿದ್ದೇನೆ. ಇದು ಪೂರ್ತಿ ಪಾರ್ಟಿ ಮಾಡುವ ಸಮಯ. ನಾವು ಒಟ್ಟಾಗಿ ಸದಾಕಾಲ ಉತ್ತಮ ಜೀವನ ಮಾಡೋಣ. ಐ ಲವ್ ಯು ಎಂದು ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

16 minutes ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

1 hour ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

4 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

4 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

16 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

18 hours ago