Categories: ವೈರಲ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದೀಗ ಈ ಜೋಡಿ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಇದೀಗ ಫೋಟೋ ಹಂಚಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಪೋಸ್ಟ್‌ನಲ್ಲೇನಿದೆ?

“ಒಂದು ದಿನ ನಾನು ಆಕೆಯನ್ನು ತುಂಬಾ ಮಿಸ್ ಮಾಡಿಕೊಂಡೆ. ಆಕೆ ನನ್ನ ಜೊತೆಗಿದ್ದರೆ ನನ್ನ ದಿನ ಇನ್ನೂ ಚೆನ್ನಾಗಿರುತ್ತಿತ್ತು, ಅವಳು ಎದುರಿಗೆ ಕುಳಿತಿದ್ದರೆ ನಾನು ಮಾಡುವ ಊಟಕ್ಕೆ ಒಂದು ಅರ್ಥ ಸಿಗುತ್ತಿತ್ತು. ನನ್ನ ಜೀವನಕ್ಕೆ ನೆಮ್ಮದಿ ಮತ್ತು ಮನೆ ಎಂಬ ಭಾವ ನೀಡಲು ಅವಳು ಬೇಕೇ ಎಂದು ನನಗೆ ಅನಿಸುತ್ತಿತ್ತು. ಆದ್ದರಿಂದ ನನ್ನ ಅತ್ಯುತ್ತಮ ಗೆಳತಿಯನ್ನು… ನನ್ನ ಹೆಂಡತಿಯನ್ನಾಗಿ ಮಾಡಿಕೊಂಡೆ. 26.02.2026.” ಎಂದು ಲವ್‌ ಮತ್ತು ಸ್ಮೈಲ್‌ ಇಮೋಜಿಯೊಂದಿಗೆ ಬರೆದುಕೊಂಡು ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಪೋಸ್ಟ್‌ನಲ್ಲೇನಿದೆ?

ಈಗ ನಿಮಗಾಗಿ ನನ್ನ ಪತಿಯನ್ನು ಪರಿಚಯಿಸುತ್ತಿದ್ದೇನೆ, ಶ್ರೀ ವಿಜಯ್ ದೇವರಕೊಂಡ ನಿಜವಾದ ಪ್ರೀತಿ ಎಂದರೆ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ ಇವರು. ಮನಸ್ಸಿನ ನೆಮ್ಮದಿ ಎಂದರೆ ಏನು ಎಂಬುದನ್ನು ನನಗೆ ತೋರಿಸಿಕೊಟ್ಟವರು. ದೊಡ್ಡದಾಗಿ ಕನಸು ಕಾಣುವುದು ತಪ್ಪಲ್ಲ ಎಂದು ಪ್ರತಿದಿನ ನನಗೆ ಹೇಳುತ್ತಾ, ನಾನು ಊಹಿಸಿರುವುದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುವ ಸಾಮರ್ಥ್ಯವನ್ನು ನನಗೆ ನೆನಪಿಸಿ ಸದಾ ಬೆಂಬಲವಾಗಿ ನಿಂತ ವ್ಯಕ್ತಿ,” ಎಂದು ಬರೆದುಕೊಂಡಿದ್ದಾರೆ.

“ನಾನು ಯಾವಾಗಲೂ ಯಾವ ರೀತಿಯ ಹೆಣ್ಣಾಗಬೇಕೆಂದು ಕನಸು ಕಂಡಿದ್ದೆನೋ, ಇಂದು ಅಂತಹವಳೇ ಆಗಿದ್ದೇನೆ. ಯಾಕೆಂದರೆ ನೀನು ಇಂದು ಈ ಮಟ್ಟಕ್ಕೆ ರೂಪಿಸಿದ್ದೀಯ. ನಾನು ನಿಜವಾಗಿಯೂ ಧನ್ಯಳಾಗಿದ್ದೇನೆ. “ವಿಜ್ಜು, ನಿನ್ನ ಮೇಲಿರುವ ನನ್ನ ಭಾವನೆಗಳನ್ನು ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಇದನ್ನು ನಾನು ನಿನಗೆ ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ,” ಎಂದು ಬರೆದುಕೊಂಡಿದ್ದಾರೆ.

ಆದರೆ, ಇದ್ದಕ್ಕಿದ್ದಂತೆ ನನ್ನೆಲ್ಲಾ ಸಾಧನೆಗಳು, ಹೋರಾಟಗಳು, ಸುಖ-ದುಃಖಗಳು, ಸಂಭ್ರಮಗಳು ಮತ್ತು ನನ್ನ ಇಡೀ ಜೀವನ ಇವೆಲ್ಲದಕ್ಕೂ ಈಗ ಒಂದು ಪರಿಪೂರ್ಣ ಅರ್ಥ ಸಿಕ್ಕಂತಿದೆ. ಯಾಕೆಂದರೆ ಈಗ ನೀನು ನನ್ನ ಜೊತೆಗಿದ್ದೀಯಾ. ಇವೆಲ್ಲವನ್ನೂ ಹತ್ತಿರದಿಂದ ನೋಡುತ್ತಾ, ನನ್ನ ಬದುಕಿನ ಅತಿದೊಡ್ಡ ಭಾಗವಾಗಿದ್ದೀಯಾ. ನಿನ್ನ ಪತ್ನಿಯಾಗುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ನಿನ್ನ ಹೆಂಡತಿಯಾಗಲು, ನಿನ್ನ ಹೆಂಡತಿ ಎಂದು ಕರೆಸಿಕೊಳ್ಳಲು ನಾನು ಕಾತರಳಾಗಿದ್ದೇನೆ. ಇದು ಪೂರ್ತಿ ಪಾರ್ಟಿ ಮಾಡುವ ಸಮಯ. ನಾವು ಒಟ್ಟಾಗಿ ಸದಾಕಾಲ ಉತ್ತಮ ಜೀವನ ಮಾಡೋಣ. ಐ ಲವ್ ಯು ಎಂದು ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago