Categories: ವೈರಲ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದೀಗ ಈ ಜೋಡಿ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಇದೀಗ ಫೋಟೋ ಹಂಚಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಪೋಸ್ಟ್‌ನಲ್ಲೇನಿದೆ?

“ಒಂದು ದಿನ ನಾನು ಆಕೆಯನ್ನು ತುಂಬಾ ಮಿಸ್ ಮಾಡಿಕೊಂಡೆ. ಆಕೆ ನನ್ನ ಜೊತೆಗಿದ್ದರೆ ನನ್ನ ದಿನ ಇನ್ನೂ ಚೆನ್ನಾಗಿರುತ್ತಿತ್ತು, ಅವಳು ಎದುರಿಗೆ ಕುಳಿತಿದ್ದರೆ ನಾನು ಮಾಡುವ ಊಟಕ್ಕೆ ಒಂದು ಅರ್ಥ ಸಿಗುತ್ತಿತ್ತು. ನನ್ನ ಜೀವನಕ್ಕೆ ನೆಮ್ಮದಿ ಮತ್ತು ಮನೆ ಎಂಬ ಭಾವ ನೀಡಲು ಅವಳು ಬೇಕೇ ಎಂದು ನನಗೆ ಅನಿಸುತ್ತಿತ್ತು. ಆದ್ದರಿಂದ ನನ್ನ ಅತ್ಯುತ್ತಮ ಗೆಳತಿಯನ್ನು… ನನ್ನ ಹೆಂಡತಿಯನ್ನಾಗಿ ಮಾಡಿಕೊಂಡೆ. 26.02.2026.” ಎಂದು ಲವ್‌ ಮತ್ತು ಸ್ಮೈಲ್‌ ಇಮೋಜಿಯೊಂದಿಗೆ ಬರೆದುಕೊಂಡು ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಪೋಸ್ಟ್‌ನಲ್ಲೇನಿದೆ?

ಈಗ ನಿಮಗಾಗಿ ನನ್ನ ಪತಿಯನ್ನು ಪರಿಚಯಿಸುತ್ತಿದ್ದೇನೆ, ಶ್ರೀ ವಿಜಯ್ ದೇವರಕೊಂಡ ನಿಜವಾದ ಪ್ರೀತಿ ಎಂದರೆ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ ಇವರು. ಮನಸ್ಸಿನ ನೆಮ್ಮದಿ ಎಂದರೆ ಏನು ಎಂಬುದನ್ನು ನನಗೆ ತೋರಿಸಿಕೊಟ್ಟವರು. ದೊಡ್ಡದಾಗಿ ಕನಸು ಕಾಣುವುದು ತಪ್ಪಲ್ಲ ಎಂದು ಪ್ರತಿದಿನ ನನಗೆ ಹೇಳುತ್ತಾ, ನಾನು ಊಹಿಸಿರುವುದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುವ ಸಾಮರ್ಥ್ಯವನ್ನು ನನಗೆ ನೆನಪಿಸಿ ಸದಾ ಬೆಂಬಲವಾಗಿ ನಿಂತ ವ್ಯಕ್ತಿ,” ಎಂದು ಬರೆದುಕೊಂಡಿದ್ದಾರೆ.

“ನಾನು ಯಾವಾಗಲೂ ಯಾವ ರೀತಿಯ ಹೆಣ್ಣಾಗಬೇಕೆಂದು ಕನಸು ಕಂಡಿದ್ದೆನೋ, ಇಂದು ಅಂತಹವಳೇ ಆಗಿದ್ದೇನೆ. ಯಾಕೆಂದರೆ ನೀನು ಇಂದು ಈ ಮಟ್ಟಕ್ಕೆ ರೂಪಿಸಿದ್ದೀಯ. ನಾನು ನಿಜವಾಗಿಯೂ ಧನ್ಯಳಾಗಿದ್ದೇನೆ. “ವಿಜ್ಜು, ನಿನ್ನ ಮೇಲಿರುವ ನನ್ನ ಭಾವನೆಗಳನ್ನು ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಇದನ್ನು ನಾನು ನಿನಗೆ ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ,” ಎಂದು ಬರೆದುಕೊಂಡಿದ್ದಾರೆ.

ಆದರೆ, ಇದ್ದಕ್ಕಿದ್ದಂತೆ ನನ್ನೆಲ್ಲಾ ಸಾಧನೆಗಳು, ಹೋರಾಟಗಳು, ಸುಖ-ದುಃಖಗಳು, ಸಂಭ್ರಮಗಳು ಮತ್ತು ನನ್ನ ಇಡೀ ಜೀವನ ಇವೆಲ್ಲದಕ್ಕೂ ಈಗ ಒಂದು ಪರಿಪೂರ್ಣ ಅರ್ಥ ಸಿಕ್ಕಂತಿದೆ. ಯಾಕೆಂದರೆ ಈಗ ನೀನು ನನ್ನ ಜೊತೆಗಿದ್ದೀಯಾ. ಇವೆಲ್ಲವನ್ನೂ ಹತ್ತಿರದಿಂದ ನೋಡುತ್ತಾ, ನನ್ನ ಬದುಕಿನ ಅತಿದೊಡ್ಡ ಭಾಗವಾಗಿದ್ದೀಯಾ. ನಿನ್ನ ಪತ್ನಿಯಾಗುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ನಿನ್ನ ಹೆಂಡತಿಯಾಗಲು, ನಿನ್ನ ಹೆಂಡತಿ ಎಂದು ಕರೆಸಿಕೊಳ್ಳಲು ನಾನು ಕಾತರಳಾಗಿದ್ದೇನೆ. ಇದು ಪೂರ್ತಿ ಪಾರ್ಟಿ ಮಾಡುವ ಸಮಯ. ನಾವು ಒಟ್ಟಾಗಿ ಸದಾಕಾಲ ಉತ್ತಮ ಜೀವನ ಮಾಡೋಣ. ಐ ಲವ್ ಯು ಎಂದು ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

19 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

20 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

2 days ago