Categories: ವೈರಲ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದೀಗ ಈ ಜೋಡಿ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಇದೀಗ ಫೋಟೋ ಹಂಚಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಪೋಸ್ಟ್‌ನಲ್ಲೇನಿದೆ?

“ಒಂದು ದಿನ ನಾನು ಆಕೆಯನ್ನು ತುಂಬಾ ಮಿಸ್ ಮಾಡಿಕೊಂಡೆ. ಆಕೆ ನನ್ನ ಜೊತೆಗಿದ್ದರೆ ನನ್ನ ದಿನ ಇನ್ನೂ ಚೆನ್ನಾಗಿರುತ್ತಿತ್ತು, ಅವಳು ಎದುರಿಗೆ ಕುಳಿತಿದ್ದರೆ ನಾನು ಮಾಡುವ ಊಟಕ್ಕೆ ಒಂದು ಅರ್ಥ ಸಿಗುತ್ತಿತ್ತು. ನನ್ನ ಜೀವನಕ್ಕೆ ನೆಮ್ಮದಿ ಮತ್ತು ಮನೆ ಎಂಬ ಭಾವ ನೀಡಲು ಅವಳು ಬೇಕೇ ಎಂದು ನನಗೆ ಅನಿಸುತ್ತಿತ್ತು. ಆದ್ದರಿಂದ ನನ್ನ ಅತ್ಯುತ್ತಮ ಗೆಳತಿಯನ್ನು… ನನ್ನ ಹೆಂಡತಿಯನ್ನಾಗಿ ಮಾಡಿಕೊಂಡೆ. 26.02.2026.” ಎಂದು ಲವ್‌ ಮತ್ತು ಸ್ಮೈಲ್‌ ಇಮೋಜಿಯೊಂದಿಗೆ ಬರೆದುಕೊಂಡು ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಪೋಸ್ಟ್‌ನಲ್ಲೇನಿದೆ?

ಈಗ ನಿಮಗಾಗಿ ನನ್ನ ಪತಿಯನ್ನು ಪರಿಚಯಿಸುತ್ತಿದ್ದೇನೆ, ಶ್ರೀ ವಿಜಯ್ ದೇವರಕೊಂಡ ನಿಜವಾದ ಪ್ರೀತಿ ಎಂದರೆ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ ಇವರು. ಮನಸ್ಸಿನ ನೆಮ್ಮದಿ ಎಂದರೆ ಏನು ಎಂಬುದನ್ನು ನನಗೆ ತೋರಿಸಿಕೊಟ್ಟವರು. ದೊಡ್ಡದಾಗಿ ಕನಸು ಕಾಣುವುದು ತಪ್ಪಲ್ಲ ಎಂದು ಪ್ರತಿದಿನ ನನಗೆ ಹೇಳುತ್ತಾ, ನಾನು ಊಹಿಸಿರುವುದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುವ ಸಾಮರ್ಥ್ಯವನ್ನು ನನಗೆ ನೆನಪಿಸಿ ಸದಾ ಬೆಂಬಲವಾಗಿ ನಿಂತ ವ್ಯಕ್ತಿ,” ಎಂದು ಬರೆದುಕೊಂಡಿದ್ದಾರೆ.

“ನಾನು ಯಾವಾಗಲೂ ಯಾವ ರೀತಿಯ ಹೆಣ್ಣಾಗಬೇಕೆಂದು ಕನಸು ಕಂಡಿದ್ದೆನೋ, ಇಂದು ಅಂತಹವಳೇ ಆಗಿದ್ದೇನೆ. ಯಾಕೆಂದರೆ ನೀನು ಇಂದು ಈ ಮಟ್ಟಕ್ಕೆ ರೂಪಿಸಿದ್ದೀಯ. ನಾನು ನಿಜವಾಗಿಯೂ ಧನ್ಯಳಾಗಿದ್ದೇನೆ. “ವಿಜ್ಜು, ನಿನ್ನ ಮೇಲಿರುವ ನನ್ನ ಭಾವನೆಗಳನ್ನು ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಇದನ್ನು ನಾನು ನಿನಗೆ ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ,” ಎಂದು ಬರೆದುಕೊಂಡಿದ್ದಾರೆ.

ಆದರೆ, ಇದ್ದಕ್ಕಿದ್ದಂತೆ ನನ್ನೆಲ್ಲಾ ಸಾಧನೆಗಳು, ಹೋರಾಟಗಳು, ಸುಖ-ದುಃಖಗಳು, ಸಂಭ್ರಮಗಳು ಮತ್ತು ನನ್ನ ಇಡೀ ಜೀವನ ಇವೆಲ್ಲದಕ್ಕೂ ಈಗ ಒಂದು ಪರಿಪೂರ್ಣ ಅರ್ಥ ಸಿಕ್ಕಂತಿದೆ. ಯಾಕೆಂದರೆ ಈಗ ನೀನು ನನ್ನ ಜೊತೆಗಿದ್ದೀಯಾ. ಇವೆಲ್ಲವನ್ನೂ ಹತ್ತಿರದಿಂದ ನೋಡುತ್ತಾ, ನನ್ನ ಬದುಕಿನ ಅತಿದೊಡ್ಡ ಭಾಗವಾಗಿದ್ದೀಯಾ. ನಿನ್ನ ಪತ್ನಿಯಾಗುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ನಿನ್ನ ಹೆಂಡತಿಯಾಗಲು, ನಿನ್ನ ಹೆಂಡತಿ ಎಂದು ಕರೆಸಿಕೊಳ್ಳಲು ನಾನು ಕಾತರಳಾಗಿದ್ದೇನೆ. ಇದು ಪೂರ್ತಿ ಪಾರ್ಟಿ ಮಾಡುವ ಸಮಯ. ನಾವು ಒಟ್ಟಾಗಿ ಸದಾಕಾಲ ಉತ್ತಮ ಜೀವನ ಮಾಡೋಣ. ಐ ಲವ್ ಯು ಎಂದು ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago