ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇದೀಗ ಈ ಜೋಡಿ ತಮ್ಮ ಮದುವೆಯ ಫೋಟೋಗಳನ್ನು ಇನ್ಸ್ಟಾಗ್ರಾಂ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.
ಇದೀಗ ಫೋಟೋ ಹಂಚಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.
ವಿಜಯ್ ದೇವರಕೊಂಡ ಪೋಸ್ಟ್ನಲ್ಲೇನಿದೆ?
“ಒಂದು ದಿನ ನಾನು ಆಕೆಯನ್ನು ತುಂಬಾ ಮಿಸ್ ಮಾಡಿಕೊಂಡೆ. ಆಕೆ ನನ್ನ ಜೊತೆಗಿದ್ದರೆ ನನ್ನ ದಿನ ಇನ್ನೂ ಚೆನ್ನಾಗಿರುತ್ತಿತ್ತು, ಅವಳು ಎದುರಿಗೆ ಕುಳಿತಿದ್ದರೆ ನಾನು ಮಾಡುವ ಊಟಕ್ಕೆ ಒಂದು ಅರ್ಥ ಸಿಗುತ್ತಿತ್ತು. ನನ್ನ ಜೀವನಕ್ಕೆ ನೆಮ್ಮದಿ ಮತ್ತು ಮನೆ ಎಂಬ ಭಾವ ನೀಡಲು ಅವಳು ಬೇಕೇ ಎಂದು ನನಗೆ ಅನಿಸುತ್ತಿತ್ತು. ಆದ್ದರಿಂದ ನನ್ನ ಅತ್ಯುತ್ತಮ ಗೆಳತಿಯನ್ನು… ನನ್ನ ಹೆಂಡತಿಯನ್ನಾಗಿ ಮಾಡಿಕೊಂಡೆ. 26.02.2026.” ಎಂದು ಲವ್ ಮತ್ತು ಸ್ಮೈಲ್ ಇಮೋಜಿಯೊಂದಿಗೆ ಬರೆದುಕೊಂಡು ಗಮನ ಸೆಳೆದಿದ್ದಾರೆ.
ರಶ್ಮಿಕಾ ಮಂದಣ್ಣ ಪೋಸ್ಟ್ನಲ್ಲೇನಿದೆ?
ಈಗ ನಿಮಗಾಗಿ ನನ್ನ ಪತಿಯನ್ನು ಪರಿಚಯಿಸುತ್ತಿದ್ದೇನೆ, ಶ್ರೀ ವಿಜಯ್ ದೇವರಕೊಂಡ ನಿಜವಾದ ಪ್ರೀತಿ ಎಂದರೆ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ ಇವರು. ಮನಸ್ಸಿನ ನೆಮ್ಮದಿ ಎಂದರೆ ಏನು ಎಂಬುದನ್ನು ನನಗೆ ತೋರಿಸಿಕೊಟ್ಟವರು. ದೊಡ್ಡದಾಗಿ ಕನಸು ಕಾಣುವುದು ತಪ್ಪಲ್ಲ ಎಂದು ಪ್ರತಿದಿನ ನನಗೆ ಹೇಳುತ್ತಾ, ನಾನು ಊಹಿಸಿರುವುದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುವ ಸಾಮರ್ಥ್ಯವನ್ನು ನನಗೆ ನೆನಪಿಸಿ ಸದಾ ಬೆಂಬಲವಾಗಿ ನಿಂತ ವ್ಯಕ್ತಿ,” ಎಂದು ಬರೆದುಕೊಂಡಿದ್ದಾರೆ.
“ನಾನು ಯಾವಾಗಲೂ ಯಾವ ರೀತಿಯ ಹೆಣ್ಣಾಗಬೇಕೆಂದು ಕನಸು ಕಂಡಿದ್ದೆನೋ, ಇಂದು ಅಂತಹವಳೇ ಆಗಿದ್ದೇನೆ. ಯಾಕೆಂದರೆ ನೀನು ಇಂದು ಈ ಮಟ್ಟಕ್ಕೆ ರೂಪಿಸಿದ್ದೀಯ. ನಾನು ನಿಜವಾಗಿಯೂ ಧನ್ಯಳಾಗಿದ್ದೇನೆ. “ವಿಜ್ಜು, ನಿನ್ನ ಮೇಲಿರುವ ನನ್ನ ಭಾವನೆಗಳನ್ನು ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಇದನ್ನು ನಾನು ನಿನಗೆ ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ,” ಎಂದು ಬರೆದುಕೊಂಡಿದ್ದಾರೆ.
ಆದರೆ, ಇದ್ದಕ್ಕಿದ್ದಂತೆ ನನ್ನೆಲ್ಲಾ ಸಾಧನೆಗಳು, ಹೋರಾಟಗಳು, ಸುಖ-ದುಃಖಗಳು, ಸಂಭ್ರಮಗಳು ಮತ್ತು ನನ್ನ ಇಡೀ ಜೀವನ ಇವೆಲ್ಲದಕ್ಕೂ ಈಗ ಒಂದು ಪರಿಪೂರ್ಣ ಅರ್ಥ ಸಿಕ್ಕಂತಿದೆ. ಯಾಕೆಂದರೆ ಈಗ ನೀನು ನನ್ನ ಜೊತೆಗಿದ್ದೀಯಾ. ಇವೆಲ್ಲವನ್ನೂ ಹತ್ತಿರದಿಂದ ನೋಡುತ್ತಾ, ನನ್ನ ಬದುಕಿನ ಅತಿದೊಡ್ಡ ಭಾಗವಾಗಿದ್ದೀಯಾ. ನಿನ್ನ ಪತ್ನಿಯಾಗುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ನಿನ್ನ ಹೆಂಡತಿಯಾಗಲು, ನಿನ್ನ ಹೆಂಡತಿ ಎಂದು ಕರೆಸಿಕೊಳ್ಳಲು ನಾನು ಕಾತರಳಾಗಿದ್ದೇನೆ. ಇದು ಪೂರ್ತಿ ಪಾರ್ಟಿ ಮಾಡುವ ಸಮಯ. ನಾವು ಒಟ್ಟಾಗಿ ಸದಾಕಾಲ ಉತ್ತಮ ಜೀವನ ಮಾಡೋಣ. ಐ ಲವ್ ಯು ಎಂದು ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…