Categories: ಐಪಿಎಲ್

ದಾಖಲೆಯ ಹತ್ತನೇ ಬಾರಿ ಫೈನಲ್ ಗೆ ಲಗ್ಗೆಯಿಟ್ಟ ಸೂಪರ್ ಕಿಂಗ್ಸ್

ಜಿದ್ದಾ-ಜಿದ್ದಿನಿಂದ ಕೂಡಿದ್ದ ಕ್ವಾಲಿಫೈಯರ್ ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಅಂತರದಿಂದ ಸೋಲಿಸಿ ದಾಖಲೆಯ 10ನೇ ಬಾರಿ ಫೈನಲ್ ಗೆ ಲಗ್ಗೆಯಿಟ್ಟರು.

ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (60) ರನ್ ಹಾಗೂ ಕಾನ್ವೆ(40) ರನ್ ಗಳಿಸುವ ಮೂಲಕ ಮೊದಲ ವಿಕೆಟ್ ನಷ್ಟಕ್ಕೆ 87 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.

ನಂತರ ಬಂದ ಶಿವಂ ದುಬೆ(1) ಹೆಚ್ಚು ಹೂತ್ತು ನಿಲ್ಲಲಿಲ್ಲ, ಅಂಬಾಟಿ ರಾಯುಡು(17) , ರಹಾನೆ(17) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (22) ರನ್ ಗಳಿಸುವ ಮೂಲಕ ತಂಡವನ್ನು 170ರ ಗಡಿ ದಾಟಿಸಿದರು. ಗುಜರಾತ್ ಟೈಟಾನ್ಸ್ ಪರವಾಗಿ ವೇಗದ ಬೌಲರ್ ಗಳಾದ ಮೊಹಮ್ಮದ್ ಶಮಿ ಹಾಗೂ ಮೋಹಿತ್ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿದರು.

170 ರನ್ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಆರಂಭಿಕ ಆಘಾತ ಅನುಭವಿಸಿತು, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಹಾ (12) ರನ್ , ನಾಯಕ ಹಾರ್ದಿಕ್ ಪಾಂಡ್ಯ (8), ಸ್ಪೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ (4) ಹಾಗೂ ತೆವಾಟಿಯಾ (3) ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದರು.

ಆರಂಭಿಕ ಆಟಗಾರ ಗಿಲ್ (42), ರಸೂನ್ ಶುನಕ(17), ವಿಜಯ್ ಶಂಕರ್ (14) ಹಾಗೂ ಆಲ್ ರೌಂಡರ್ ರಶೀದ್ ಖಾನ್ (30) ರನ್ ಗಳಿಸಿದರೂ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ, ಸಿಎಸ್ಕೆ ಪರವಾಗಿ ದೀಪಕ್ ಚಹಾರ್, ರವೀಂದ್ರ ಜಡೇಜಾ, ಮಹೇಶ್ ತೀಕ್ಷ್ಣ ಹಾಗೂ ಪ್ರತಿರಾಣ ತಲಾ ಎರಡು ವಿಕೆಟ್ ಪಡೆದು ಮಿಂಚಿದರು, ಅತ್ಯುತ್ತಮವಾದ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಮಾಡಿದ ರುತುರಾಜ್ ಗಾಯಕ್ವಾಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

17 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago