Categories: ಐಪಿಎಲ್

ದಾಖಲೆಯ ಹತ್ತನೇ ಬಾರಿ ಫೈನಲ್ ಗೆ ಲಗ್ಗೆಯಿಟ್ಟ ಸೂಪರ್ ಕಿಂಗ್ಸ್

ಜಿದ್ದಾ-ಜಿದ್ದಿನಿಂದ ಕೂಡಿದ್ದ ಕ್ವಾಲಿಫೈಯರ್ ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಅಂತರದಿಂದ ಸೋಲಿಸಿ ದಾಖಲೆಯ 10ನೇ ಬಾರಿ ಫೈನಲ್ ಗೆ ಲಗ್ಗೆಯಿಟ್ಟರು.

ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (60) ರನ್ ಹಾಗೂ ಕಾನ್ವೆ(40) ರನ್ ಗಳಿಸುವ ಮೂಲಕ ಮೊದಲ ವಿಕೆಟ್ ನಷ್ಟಕ್ಕೆ 87 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.

ನಂತರ ಬಂದ ಶಿವಂ ದುಬೆ(1) ಹೆಚ್ಚು ಹೂತ್ತು ನಿಲ್ಲಲಿಲ್ಲ, ಅಂಬಾಟಿ ರಾಯುಡು(17) , ರಹಾನೆ(17) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (22) ರನ್ ಗಳಿಸುವ ಮೂಲಕ ತಂಡವನ್ನು 170ರ ಗಡಿ ದಾಟಿಸಿದರು. ಗುಜರಾತ್ ಟೈಟಾನ್ಸ್ ಪರವಾಗಿ ವೇಗದ ಬೌಲರ್ ಗಳಾದ ಮೊಹಮ್ಮದ್ ಶಮಿ ಹಾಗೂ ಮೋಹಿತ್ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿದರು.

170 ರನ್ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಆರಂಭಿಕ ಆಘಾತ ಅನುಭವಿಸಿತು, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಹಾ (12) ರನ್ , ನಾಯಕ ಹಾರ್ದಿಕ್ ಪಾಂಡ್ಯ (8), ಸ್ಪೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ (4) ಹಾಗೂ ತೆವಾಟಿಯಾ (3) ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದರು.

ಆರಂಭಿಕ ಆಟಗಾರ ಗಿಲ್ (42), ರಸೂನ್ ಶುನಕ(17), ವಿಜಯ್ ಶಂಕರ್ (14) ಹಾಗೂ ಆಲ್ ರೌಂಡರ್ ರಶೀದ್ ಖಾನ್ (30) ರನ್ ಗಳಿಸಿದರೂ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ, ಸಿಎಸ್ಕೆ ಪರವಾಗಿ ದೀಪಕ್ ಚಹಾರ್, ರವೀಂದ್ರ ಜಡೇಜಾ, ಮಹೇಶ್ ತೀಕ್ಷ್ಣ ಹಾಗೂ ಪ್ರತಿರಾಣ ತಲಾ ಎರಡು ವಿಕೆಟ್ ಪಡೆದು ಮಿಂಚಿದರು, ಅತ್ಯುತ್ತಮವಾದ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಮಾಡಿದ ರುತುರಾಜ್ ಗಾಯಕ್ವಾಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

56 minutes ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

5 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

5 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

10 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

11 hours ago