Categories: ಐಪಿಎಲ್

ದಾಖಲೆಯ ಹತ್ತನೇ ಬಾರಿ ಫೈನಲ್ ಗೆ ಲಗ್ಗೆಯಿಟ್ಟ ಸೂಪರ್ ಕಿಂಗ್ಸ್

ಜಿದ್ದಾ-ಜಿದ್ದಿನಿಂದ ಕೂಡಿದ್ದ ಕ್ವಾಲಿಫೈಯರ್ ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಅಂತರದಿಂದ ಸೋಲಿಸಿ ದಾಖಲೆಯ 10ನೇ ಬಾರಿ ಫೈನಲ್ ಗೆ ಲಗ್ಗೆಯಿಟ್ಟರು.

ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (60) ರನ್ ಹಾಗೂ ಕಾನ್ವೆ(40) ರನ್ ಗಳಿಸುವ ಮೂಲಕ ಮೊದಲ ವಿಕೆಟ್ ನಷ್ಟಕ್ಕೆ 87 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.

ನಂತರ ಬಂದ ಶಿವಂ ದುಬೆ(1) ಹೆಚ್ಚು ಹೂತ್ತು ನಿಲ್ಲಲಿಲ್ಲ, ಅಂಬಾಟಿ ರಾಯುಡು(17) , ರಹಾನೆ(17) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (22) ರನ್ ಗಳಿಸುವ ಮೂಲಕ ತಂಡವನ್ನು 170ರ ಗಡಿ ದಾಟಿಸಿದರು. ಗುಜರಾತ್ ಟೈಟಾನ್ಸ್ ಪರವಾಗಿ ವೇಗದ ಬೌಲರ್ ಗಳಾದ ಮೊಹಮ್ಮದ್ ಶಮಿ ಹಾಗೂ ಮೋಹಿತ್ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿದರು.

170 ರನ್ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಆರಂಭಿಕ ಆಘಾತ ಅನುಭವಿಸಿತು, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಹಾ (12) ರನ್ , ನಾಯಕ ಹಾರ್ದಿಕ್ ಪಾಂಡ್ಯ (8), ಸ್ಪೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ (4) ಹಾಗೂ ತೆವಾಟಿಯಾ (3) ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದರು.

ಆರಂಭಿಕ ಆಟಗಾರ ಗಿಲ್ (42), ರಸೂನ್ ಶುನಕ(17), ವಿಜಯ್ ಶಂಕರ್ (14) ಹಾಗೂ ಆಲ್ ರೌಂಡರ್ ರಶೀದ್ ಖಾನ್ (30) ರನ್ ಗಳಿಸಿದರೂ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ, ಸಿಎಸ್ಕೆ ಪರವಾಗಿ ದೀಪಕ್ ಚಹಾರ್, ರವೀಂದ್ರ ಜಡೇಜಾ, ಮಹೇಶ್ ತೀಕ್ಷ್ಣ ಹಾಗೂ ಪ್ರತಿರಾಣ ತಲಾ ಎರಡು ವಿಕೆಟ್ ಪಡೆದು ಮಿಂಚಿದರು, ಅತ್ಯುತ್ತಮವಾದ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಮಾಡಿದ ರುತುರಾಜ್ ಗಾಯಕ್ವಾಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

21 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

22 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago