ಜಿದ್ದಾ-ಜಿದ್ದಿನಿಂದ ಕೂಡಿದ್ದ ಕ್ವಾಲಿಫೈಯರ್ ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಅಂತರದಿಂದ ಸೋಲಿಸಿ ದಾಖಲೆಯ 10ನೇ ಬಾರಿ ಫೈನಲ್ ಗೆ ಲಗ್ಗೆಯಿಟ್ಟರು.
ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (60) ರನ್ ಹಾಗೂ ಕಾನ್ವೆ(40) ರನ್ ಗಳಿಸುವ ಮೂಲಕ ಮೊದಲ ವಿಕೆಟ್ ನಷ್ಟಕ್ಕೆ 87 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು.
ನಂತರ ಬಂದ ಶಿವಂ ದುಬೆ(1) ಹೆಚ್ಚು ಹೂತ್ತು ನಿಲ್ಲಲಿಲ್ಲ, ಅಂಬಾಟಿ ರಾಯುಡು(17) , ರಹಾನೆ(17) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (22) ರನ್ ಗಳಿಸುವ ಮೂಲಕ ತಂಡವನ್ನು 170ರ ಗಡಿ ದಾಟಿಸಿದರು. ಗುಜರಾತ್ ಟೈಟಾನ್ಸ್ ಪರವಾಗಿ ವೇಗದ ಬೌಲರ್ ಗಳಾದ ಮೊಹಮ್ಮದ್ ಶಮಿ ಹಾಗೂ ಮೋಹಿತ್ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…