Categories: Trending

ದಾಖಲೆ ನಿರ್ಮಿಸಿದ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಕಟೌಟ್: ‘ಗೇಮ್ ಚೇಂಜರ್’ ನ 256 ಅಡಿಗಳ ಬೃಹತ್ ಕಟೌಟ್ ವಿಜಯವಾಡದಲ್ಲಿ ಅನಾವರಣ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮುಂಬರುವ ಚಿತ್ರ ‘ಗೇಮ್ ಚೇಂಜರ್’ ಬಿಡುಗಡೆಗೂ ಮುನ್ನ ಅವರ 256 ಅಡಿಗಳ ಬೃಹತ್ ಕಟೌಟ್ ಅನ್ನು ಭಾನುವಾರ ವಿಜಯವಾಡದಲ್ಲಿ ಅನಾವರಣಗೊಳಿಸಲಾಗಿದೆ.

ನಿರ್ಮಾಪಕ ದಿಲ್ ರಾಜು ಕಟೌಟ್ ನ್ನು ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿಗಳು ಜಮಾಯಿಸಿದ್ದಾರೆ.

ಇಷ್ಟು ದೊಡ್ಡ ಕಟೌಟ್ ಯಾವ ನಟನಿಗೂ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಅತಿ ದೊಡ್ಡ ಕಟೌಟ್ ನಿರ್ಮಿಸಿ ದಾಖಲೆ ಬರೆಯಲಾಗಿದೆ.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಜನವರಿ 10 ರಂದು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಡಿಸೆಂಬರ್ 29 ರಂದು ವಿಜಯವಾಡದ ವಜ್ರ ಮೈದಾನದಲ್ಲಿ ಸಂಜೆ 4 ಗಂಟೆಗೆ ಅತಿದೊಡ್ಡ ಕಟೌಟ್ ಅನಾವರಣಗೊಳಿಸಲಾಯಿತು.

ಈ ‘ಕಟೌಟ್’ ಭಾರತೀಯ ಚಿತ್ರರಂಗದ ಭಾಗವಾಗಿದ್ದು, ಇದು ಕೇವಲ ಕಟೌಟ್ ಆಗದೆ ಸ್ಟಾರ್ ಹೀರೋಗಳ ಅಭಿಮಾನಿಗಳಿಗೆ ಭಾವನೆಯಾಗಿದೆ. ರಾಮ್ ಚರಣ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ.

ಜನವರಿ 04 ರಂದು ರಾಜಮಂಡ್ರಿಯಲ್ಲಿ ಗೇಮ್ ಚೇಂಜರ್ ನ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀರೋಗಳ ಕಟೌಟ್ 

ಅಲ್ಲು ಅರ್ಜುನ್ -108 ಅಡಿ ಕಟೌಟ್

ವಿಜಯ್ – 175 ಅಡಿ ಕಟೌಟ್

ಧನುಷ್ ಕಟೌಟ್- 180 ಅಡಿ ಕಟೌಟ್

ಅಜಿತ್ ಕುಮಾರ್-190 ಅಡಿ ಕಟೌಟ್

ಸೂರ್ಯ- 215 ಅಡಿ ಕಟೌಟ್

ಪ್ರಭಾಸ್- 230 ಅಡಿ ಕಟೌಟ್

ಯಶ್- 236 ಅಡಿ ಕಟೌಟ್

ರಾಮ್ ಚರಣ್ -256 ಅಡಿ ಕಟೌಟ್

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

15 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

20 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago