Categories: Trending

ದಾಖಲೆ ನಿರ್ಮಿಸಿದ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಕಟೌಟ್: ‘ಗೇಮ್ ಚೇಂಜರ್’ ನ 256 ಅಡಿಗಳ ಬೃಹತ್ ಕಟೌಟ್ ವಿಜಯವಾಡದಲ್ಲಿ ಅನಾವರಣ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮುಂಬರುವ ಚಿತ್ರ ‘ಗೇಮ್ ಚೇಂಜರ್’ ಬಿಡುಗಡೆಗೂ ಮುನ್ನ ಅವರ 256 ಅಡಿಗಳ ಬೃಹತ್ ಕಟೌಟ್ ಅನ್ನು ಭಾನುವಾರ ವಿಜಯವಾಡದಲ್ಲಿ ಅನಾವರಣಗೊಳಿಸಲಾಗಿದೆ.

ನಿರ್ಮಾಪಕ ದಿಲ್ ರಾಜು ಕಟೌಟ್ ನ್ನು ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿಗಳು ಜಮಾಯಿಸಿದ್ದಾರೆ.

ಇಷ್ಟು ದೊಡ್ಡ ಕಟೌಟ್ ಯಾವ ನಟನಿಗೂ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಅತಿ ದೊಡ್ಡ ಕಟೌಟ್ ನಿರ್ಮಿಸಿ ದಾಖಲೆ ಬರೆಯಲಾಗಿದೆ.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಜನವರಿ 10 ರಂದು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಡಿಸೆಂಬರ್ 29 ರಂದು ವಿಜಯವಾಡದ ವಜ್ರ ಮೈದಾನದಲ್ಲಿ ಸಂಜೆ 4 ಗಂಟೆಗೆ ಅತಿದೊಡ್ಡ ಕಟೌಟ್ ಅನಾವರಣಗೊಳಿಸಲಾಯಿತು.

ಈ ‘ಕಟೌಟ್’ ಭಾರತೀಯ ಚಿತ್ರರಂಗದ ಭಾಗವಾಗಿದ್ದು, ಇದು ಕೇವಲ ಕಟೌಟ್ ಆಗದೆ ಸ್ಟಾರ್ ಹೀರೋಗಳ ಅಭಿಮಾನಿಗಳಿಗೆ ಭಾವನೆಯಾಗಿದೆ. ರಾಮ್ ಚರಣ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ.

ಜನವರಿ 04 ರಂದು ರಾಜಮಂಡ್ರಿಯಲ್ಲಿ ಗೇಮ್ ಚೇಂಜರ್ ನ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀರೋಗಳ ಕಟೌಟ್ 

ಅಲ್ಲು ಅರ್ಜುನ್ -108 ಅಡಿ ಕಟೌಟ್

ವಿಜಯ್ – 175 ಅಡಿ ಕಟೌಟ್

ಧನುಷ್ ಕಟೌಟ್- 180 ಅಡಿ ಕಟೌಟ್

ಅಜಿತ್ ಕುಮಾರ್-190 ಅಡಿ ಕಟೌಟ್

ಸೂರ್ಯ- 215 ಅಡಿ ಕಟೌಟ್

ಪ್ರಭಾಸ್- 230 ಅಡಿ ಕಟೌಟ್

ಯಶ್- 236 ಅಡಿ ಕಟೌಟ್

ರಾಮ್ ಚರಣ್ -256 ಅಡಿ ಕಟೌಟ್

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

4 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

16 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

17 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

20 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago