ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮುಂಬರುವ ಚಿತ್ರ ‘ಗೇಮ್ ಚೇಂಜರ್’ ಬಿಡುಗಡೆಗೂ ಮುನ್ನ ಅವರ 256 ಅಡಿಗಳ ಬೃಹತ್ ಕಟೌಟ್ ಅನ್ನು ಭಾನುವಾರ ವಿಜಯವಾಡದಲ್ಲಿ ಅನಾವರಣಗೊಳಿಸಲಾಗಿದೆ.
ನಿರ್ಮಾಪಕ ದಿಲ್ ರಾಜು ಕಟೌಟ್ ನ್ನು ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿಗಳು ಜಮಾಯಿಸಿದ್ದಾರೆ.
ಇಷ್ಟು ದೊಡ್ಡ ಕಟೌಟ್ ಯಾವ ನಟನಿಗೂ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಅತಿ ದೊಡ್ಡ ಕಟೌಟ್ ನಿರ್ಮಿಸಿ ದಾಖಲೆ ಬರೆಯಲಾಗಿದೆ.
ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಜನವರಿ 10 ರಂದು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಡಿಸೆಂಬರ್ 29 ರಂದು ವಿಜಯವಾಡದ ವಜ್ರ ಮೈದಾನದಲ್ಲಿ ಸಂಜೆ 4 ಗಂಟೆಗೆ ಅತಿದೊಡ್ಡ ಕಟೌಟ್ ಅನಾವರಣಗೊಳಿಸಲಾಯಿತು.
ಈ ‘ಕಟೌಟ್’ ಭಾರತೀಯ ಚಿತ್ರರಂಗದ ಭಾಗವಾಗಿದ್ದು, ಇದು ಕೇವಲ ಕಟೌಟ್ ಆಗದೆ ಸ್ಟಾರ್ ಹೀರೋಗಳ ಅಭಿಮಾನಿಗಳಿಗೆ ಭಾವನೆಯಾಗಿದೆ. ರಾಮ್ ಚರಣ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ.
ಜನವರಿ 04 ರಂದು ರಾಜಮಂಡ್ರಿಯಲ್ಲಿ ಗೇಮ್ ಚೇಂಜರ್ ನ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹೀರೋಗಳ ಕಟೌಟ್
ಅಲ್ಲು ಅರ್ಜುನ್ -108 ಅಡಿ ಕಟೌಟ್
ವಿಜಯ್ – 175 ಅಡಿ ಕಟೌಟ್
ಧನುಷ್ ಕಟೌಟ್- 180 ಅಡಿ ಕಟೌಟ್
ಅಜಿತ್ ಕುಮಾರ್-190 ಅಡಿ ಕಟೌಟ್
ಸೂರ್ಯ- 215 ಅಡಿ ಕಟೌಟ್
ಪ್ರಭಾಸ್- 230 ಅಡಿ ಕಟೌಟ್
ಯಶ್- 236 ಅಡಿ ಕಟೌಟ್
ರಾಮ್ ಚರಣ್ -256 ಅಡಿ ಕಟೌಟ್
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…