Categories: Home

ದಾದಿಯರು ಆರೋಗ್ಯ ವ್ಯವಸ್ಥೆಗೆ ಬೆನ್ನೆಲುಬಾಗಿದ್ದಾರೆ- ಸಚಿವ ದಿನೇಶ್‌ಗುಂಡೂರಾವ್‌

ಬೆಂಗಳೂರು: ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಎಚ್‌ಸಿಜಿ ಆಯೋಜಿಸಿದ್ದ ಭಾರತದ ಅತಿದೊಡ್ಡ ಕ್ಯಾನ್ಸರ್ ಕೇರ್ ನೆಟ್‌ವರ್ಕ್ನ “5ನೇ ವಾರ್ಷಿಕ ರಾಷ್ಟ್ರೀಯ ನರ್ಸಿಂಗ್ ಕಾನ್ಫರೆನ್ಸ್- 2024” ನನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯರಷ್ಟೇ ಪ್ರಬುದ್ಧರಾಗಿ ದಾದಿಯರು ನಮ್ಮ ಆರೋಗ್ಯದ ಆರೈಕೆ ಮಾಡುತ್ತಿದ್ದು, ಇಡೀ ಆರೋಗ್ಯ ವ್ಯವಸ್ಥೆಗೇ ಅವರು ಬೆನ್ನೆಲುಬಾಗಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ದಾದಿಯರು ತಮ್ಮ ಜೀವದ ಆಸೆ ಬದಿಗಿಟ್ಟು ರೋಗಿಗಳ ಸೇವೆ ಮಾಡಿದ್ದಾರೆ ಎಂದರು.

ವೈದ್ಯರು ಚಿಕಿತ್ಸೆ ನೀಡಿದರೆ, ದಾದಿಯರು ರೋಗಿಯು ಆಸ್ಪತ್ರೆಯಿಂದ ಬಿಡುಗಡೆ ಆಗುವವರೆಗೂ ಆರೈಕೆ ಮಾಡುತ್ತಾರೆ. ದಾದಿಯರ ಕೆಲಸ ಗೌರವಾನ್ವಿತ ವೃತ್ತಿಯಾಗಿದ್ದು, ಅವರ ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು. ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಎಂದು ಹೇಳಿದರು.

ಭಾರತವು ನರ್ಸಿಂಗ್ ವೃತ್ತಿಯಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ, ನಮ್ಮ ದಾದಿಯರು ತಮ್ಮ ಪರಿಣತಿ ಮತ್ತು ಬದ್ಧತೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ನಾವು ಅವರಿಗೆ ನೀಡಬೇಕಾದ ತರಬೇತಿ, ಸೌಲಭ್ಯಗಳು ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಮೂಲಕ ಅವರಿಗೆ ಸಹಕಾರಿಯಾಗಿ ನಿಲ್ಲಬೇಕು ಎಂದರು,

ಎಚ್‌ಸಿಜಿ ಸಿಇಒ ರಾಜ್ ಗೋರ್ ಮಾತನಾಡಿ, ದಾದಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಈ ಅಧಿವೇಶನ ಹೆಚ್ಚು ಅವಶ್ಯಕ. ಎಚ್‌ಸಿಜಿ ದಾದಿಯರಿಗೆ ವಿಶೇಷ ಸ್ಥಾನಮಾನ ನೀಡಿದ್ದು, ಅವರಿಗೆ ಕಾಲಕ್ಕೆ ತಕ್ಕಂತೆ ತರಬೇತಿ ನೀಡುವ ಮೂಲಕ ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಸಮಾವೇಶದಲ್ಲಿ ಅನೇಕ ವಿಷಯಗಳ ಮೇಲೆ ಚರ್ಷೆ ನಡೆಸಲಾಯಿತು.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

4 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

5 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

8 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

1 day ago