ಬೆಂಗಳೂರು: ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಎಚ್ಸಿಜಿ ಆಯೋಜಿಸಿದ್ದ ಭಾರತದ ಅತಿದೊಡ್ಡ ಕ್ಯಾನ್ಸರ್ ಕೇರ್ ನೆಟ್ವರ್ಕ್ನ “5ನೇ ವಾರ್ಷಿಕ ರಾಷ್ಟ್ರೀಯ ನರ್ಸಿಂಗ್ ಕಾನ್ಫರೆನ್ಸ್- 2024” ನನ್ನು ಉದ್ಘಾಟಿಸಿ ಮಾತನಾಡಿದರು.
ವೈದ್ಯರಷ್ಟೇ ಪ್ರಬುದ್ಧರಾಗಿ ದಾದಿಯರು ನಮ್ಮ ಆರೋಗ್ಯದ ಆರೈಕೆ ಮಾಡುತ್ತಿದ್ದು, ಇಡೀ ಆರೋಗ್ಯ ವ್ಯವಸ್ಥೆಗೇ ಅವರು ಬೆನ್ನೆಲುಬಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ದಾದಿಯರು ತಮ್ಮ ಜೀವದ ಆಸೆ ಬದಿಗಿಟ್ಟು ರೋಗಿಗಳ ಸೇವೆ ಮಾಡಿದ್ದಾರೆ ಎಂದರು.
ವೈದ್ಯರು ಚಿಕಿತ್ಸೆ ನೀಡಿದರೆ, ದಾದಿಯರು ರೋಗಿಯು ಆಸ್ಪತ್ರೆಯಿಂದ ಬಿಡುಗಡೆ ಆಗುವವರೆಗೂ ಆರೈಕೆ ಮಾಡುತ್ತಾರೆ. ದಾದಿಯರ ಕೆಲಸ ಗೌರವಾನ್ವಿತ ವೃತ್ತಿಯಾಗಿದ್ದು, ಅವರ ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು. ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಎಂದು ಹೇಳಿದರು.
ಭಾರತವು ನರ್ಸಿಂಗ್ ವೃತ್ತಿಯಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ, ನಮ್ಮ ದಾದಿಯರು ತಮ್ಮ ಪರಿಣತಿ ಮತ್ತು ಬದ್ಧತೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ನಾವು ಅವರಿಗೆ ನೀಡಬೇಕಾದ ತರಬೇತಿ, ಸೌಲಭ್ಯಗಳು ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಮೂಲಕ ಅವರಿಗೆ ಸಹಕಾರಿಯಾಗಿ ನಿಲ್ಲಬೇಕು ಎಂದರು,
ಎಚ್ಸಿಜಿ ಸಿಇಒ ರಾಜ್ ಗೋರ್ ಮಾತನಾಡಿ, ದಾದಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಈ ಅಧಿವೇಶನ ಹೆಚ್ಚು ಅವಶ್ಯಕ. ಎಚ್ಸಿಜಿ ದಾದಿಯರಿಗೆ ವಿಶೇಷ ಸ್ಥಾನಮಾನ ನೀಡಿದ್ದು, ಅವರಿಗೆ ಕಾಲಕ್ಕೆ ತಕ್ಕಂತೆ ತರಬೇತಿ ನೀಡುವ ಮೂಲಕ ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಸಮಾವೇಶದಲ್ಲಿ ಅನೇಕ ವಿಷಯಗಳ ಮೇಲೆ ಚರ್ಷೆ ನಡೆಸಲಾಯಿತು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…