Categories: Home

ದಾದಿಯರು ಆರೋಗ್ಯ ವ್ಯವಸ್ಥೆಗೆ ಬೆನ್ನೆಲುಬಾಗಿದ್ದಾರೆ- ಸಚಿವ ದಿನೇಶ್‌ಗುಂಡೂರಾವ್‌

ಬೆಂಗಳೂರು: ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಎಚ್‌ಸಿಜಿ ಆಯೋಜಿಸಿದ್ದ ಭಾರತದ ಅತಿದೊಡ್ಡ ಕ್ಯಾನ್ಸರ್ ಕೇರ್ ನೆಟ್‌ವರ್ಕ್ನ “5ನೇ ವಾರ್ಷಿಕ ರಾಷ್ಟ್ರೀಯ ನರ್ಸಿಂಗ್ ಕಾನ್ಫರೆನ್ಸ್- 2024” ನನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯರಷ್ಟೇ ಪ್ರಬುದ್ಧರಾಗಿ ದಾದಿಯರು ನಮ್ಮ ಆರೋಗ್ಯದ ಆರೈಕೆ ಮಾಡುತ್ತಿದ್ದು, ಇಡೀ ಆರೋಗ್ಯ ವ್ಯವಸ್ಥೆಗೇ ಅವರು ಬೆನ್ನೆಲುಬಾಗಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ದಾದಿಯರು ತಮ್ಮ ಜೀವದ ಆಸೆ ಬದಿಗಿಟ್ಟು ರೋಗಿಗಳ ಸೇವೆ ಮಾಡಿದ್ದಾರೆ ಎಂದರು.

ವೈದ್ಯರು ಚಿಕಿತ್ಸೆ ನೀಡಿದರೆ, ದಾದಿಯರು ರೋಗಿಯು ಆಸ್ಪತ್ರೆಯಿಂದ ಬಿಡುಗಡೆ ಆಗುವವರೆಗೂ ಆರೈಕೆ ಮಾಡುತ್ತಾರೆ. ದಾದಿಯರ ಕೆಲಸ ಗೌರವಾನ್ವಿತ ವೃತ್ತಿಯಾಗಿದ್ದು, ಅವರ ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು. ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಎಂದು ಹೇಳಿದರು.

ಭಾರತವು ನರ್ಸಿಂಗ್ ವೃತ್ತಿಯಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ, ನಮ್ಮ ದಾದಿಯರು ತಮ್ಮ ಪರಿಣತಿ ಮತ್ತು ಬದ್ಧತೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ನಾವು ಅವರಿಗೆ ನೀಡಬೇಕಾದ ತರಬೇತಿ, ಸೌಲಭ್ಯಗಳು ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಮೂಲಕ ಅವರಿಗೆ ಸಹಕಾರಿಯಾಗಿ ನಿಲ್ಲಬೇಕು ಎಂದರು,

ಎಚ್‌ಸಿಜಿ ಸಿಇಒ ರಾಜ್ ಗೋರ್ ಮಾತನಾಡಿ, ದಾದಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಈ ಅಧಿವೇಶನ ಹೆಚ್ಚು ಅವಶ್ಯಕ. ಎಚ್‌ಸಿಜಿ ದಾದಿಯರಿಗೆ ವಿಶೇಷ ಸ್ಥಾನಮಾನ ನೀಡಿದ್ದು, ಅವರಿಗೆ ಕಾಲಕ್ಕೆ ತಕ್ಕಂತೆ ತರಬೇತಿ ನೀಡುವ ಮೂಲಕ ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಸಮಾವೇಶದಲ್ಲಿ ಅನೇಕ ವಿಷಯಗಳ ಮೇಲೆ ಚರ್ಷೆ ನಡೆಸಲಾಯಿತು.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

2 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

5 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

17 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

20 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

21 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago